ಬೆಂಗಳೂರು:ರಾಜ್ಯದಲ್ಲೀಗ ಗ್ರಾಮ ಪಂಚಾಯಿತಿ ಚುನಾವಣೆಯದ್ದೇ ಸದ್ದು. ಮೊದಲ ಹಂತದ ಮತದಾನ ಡಿ.22ರಂದು ನಡೆಯಲಿದೆ. ನಾಮಪತ್ರ ಸಲ್ಲಿಕೆ ಸೋಮವಾರದಿಂದಲೇ ಆರಂಭವಾಗಿದೆ. ಟಫ್​ ಫೈಟ್​ ಎನಿಸಿರುವ ಲೋಕಲ್​ ವಾರ್​ನಲ್ಲಿ ಕೆಲವೆಡೆ ಅವಿರೋಧ ಆಯ್ಕೆಗೆ ಕಸರತ್ತು ನಡೆದಿದೆ. ಅದಕ್ಕಾಗಿ ಸದಸ್ಯ ಸ್ಥಾನ ಬಿಕರಿ ಅಸ್ತ್ರ ಪ್ರಯೋಗ ಬಹುತೇಕ ಕಡೆ ನಡೆಯುತ್ತಿದೆ. ಗ್ರಾಪಂ ಸದಸ್ಯ ಸ್ಥಾನ ಆರ್ಥಿಕ ಸ್ಥಿತಿವಂತರ ಪಾಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯ ಚುನಾವಣಾ ಆಯೋಗ ಸಜ್ಜಾಗಿದೆ.
ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜು ಹಾಕುವವರ ವಿರುದ್ಧ ಮೊಕದ್ದಮೆ ಹೂಡಿ ಎಫ್​​ಐಆರ್​ ದಾಖಲಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಹರಾಜು ಮಾಡಿರುವ ಸಾಕ್ಷಿ ಸಿಕ್ಕಿರುವ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 13 ಜನರ ವಿರುದ್ಧ ಎಫ್​​ಐಆರ್​ ದಾಖಲಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ. ಬಿ.ಬಸವರಾಜು ‘ವಿಜಯವಾಣಿ’ಗೆ ತಿಳಿಸಿದರು.
ಬೆಳಗಾವಿ, ಮಂಡ್ಯ ಸೇರಿ ಕೆಲ ಜಿಲ್ಲೆಗಳಲ್ಲಿ ಸದಸ್ಯ ಸ್ಥಾನಗಳನ್ನು ಹರಾಜು ಹಾಕಿರುವ ಮಾಹಿತಿ ಇದೆ. ಆದ್ದರಿಂದಲೇ ಎಲ್ಲ ಜಿಲ್ಲಾಧಿಕಾರಿಗಳಿಗೂ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ ಎಂದು ಬಸವರಾಜು ತಿಳಿಸಿದರು.
ಹರಾಜು ಹಾಕಿ ಸದಸ್ಯತ್ವ ಪಡೆಯುವುದು ಪ್ರಜಾತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೃತ್ಯವಾಗುತ್ತದೆ. ಇದು ಪ್ರಜಾಪ್ರಭುತ್ವಕ್ಕೆ ವಿರೋಧ. ಚುನಾವಣೆಗಳನ್ನು ನಡೆಸಬೇಕು. ಸೋಲು, ಗೆಲುವು ಬೇರೆ. ಆದ್ದರಿಂದಲೇ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವುದು ಅಗತ್ಯವಾಗಿದೆ ಎಂದು ಬಸವರಾಜು ಅಭಿಪ್ರಾಯಪಟ್ಟರು.
ಚುನಾವಣೆ ಮೂಲಕ ಆಯ್ಕೆ ಆಗಬೇಕಾಗಿರುವ ಕಡೆ ಹರಾಜು ಹಾಕುವುದು ಕಾನೂನು ವಿರೋಧವಾಗುತ್ತದೆ. ಚುನಾವಣೆ ನಡೆದು ಪ್ರತಿನಿಧಿಗಳು ಆಯ್ಕೆಯಾದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಸಾಯುವ ಮುನ್ನ ಅಪ್ಪನಿಗೆ ಊಟ ಬಡಿಸಿದರು, ಆ ನಂತರ ಅಕ್ಕ-ತಂಗಿ ಇಬ್ಬರೂ ನೇಣಿಗೆ ಶರಣಾದರು!

ನಾನು ಜನರ ಪ್ರೀತಿಯ ಬಂಧನದಲ್ಲಿರುವೆ, ವದಂತಿ ಹಬ್ಬಿಸಿ ಮನಸ್ಸಿಗೆ ನೋವುಕೊಡಬೇಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
