ಕಲಬುರಗಿ :ಕಮಲಾಪುರ ತಾಲೂಕಿನ ಶ್ರೀಚಂದ‌ ಗ್ರಾಮದ ಪಂಚಾಯಿತಿಯ ಎರಡನೇ ವಾರ್ಡ್‍ನಲ್ಲಿ ಚಿನ್ನೆ ಬದಲಾಗಿದ್ದರಿಂದ ಮತದಾನ ಸ್ಥಗಿತಗೊಂಡಿದೆ. ‘ನನಗೆ ಹಲ್ಲುಜ್ಜುವ ಪೇಸ್ಟ್ ಚಿಹ್ನೆ ನೀಡಲಾಗಿತ್ತು. ಈಗಾಗಲೇ ಇದೇ ಚಿಹ್ನೆ ಮೂಲಕ ಪ್ರಚಾರ ಕೈಗೊಂಡಿದ್ದೇನೆ. ಆದರೆ ಮತ ಪತ್ರದಲ್ಲಿ ಹಲ್ಲುಜ್ಜುವ ಬ್ರಷ್ ಪ್ರಿಂಟ್ ಆಗಿದೆ’ ಎಂದು ಅಭ್ಯರ್ಥಿ ಗಜಾನಂದ ದತ್ತಾಪ್ರಸಾದ ತಕರಾರು ತೆಗೆದಾಗ ಕೆಲಕಾಲ ಮತದಾನ ಸ್ಥಗಿತಗೊಂಡಿದೆ.
ಗಜಾನಂದ ತಮ್ಮ ಪ್ರಚಾರ ಪತ್ರದಲ್ಲಿ ಟೂತ್ ಪೇಸ್ಟ್ ಚಿಹ್ನೆ ಹಾಕಿಕೊಂಡು ಪ್ರಚಾರ ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ ಮತ ಚಲಾಯಿಸಲು ಹೋದ ಮತದಾರರೊಬ್ಬರು ಗಮನಿಸಿದ್ದಾರೆ. ಚಿಹ್ನೆ ಕಾಣದೆ ದಂಗಾಗಿದ್ದಾರೆ. ಹೊರಗೆ ಬಂದು ಅಭ್ಯರ್ಥಿಗೆ ‘ನೀನು ಟೂತ್ ಪೇಸ್ಟ್ ಗೆ ಮತ ಚಲಾಯಿಸಲು ಹೇಳಿದ್ದು, ಆದರೆ ಅಲ್ಲಿ ಈ ಚಿಹ್ನೆ ಇಲ್ಲ. ಬರಿ ಟೂತ್ ಬ್ರಷ್ ಇದೆ’ ಎಂದಿದ್ದಾರೆ. ಆಗ ಅಭ್ಯರ್ಥಿ ಚುನಾವಣಾಧಿಕಾರಿಗೆ ತಿಳಿಸಿದ್ದಾರೆ. ಅಷ್ಟಕ್ಕೆ ಚುನಾವಣೆ ಸ್ಥಗಿತ ಗೊಳಿಸಲಾಗಿದೆ.
ಇದನ್ನೂ ಓದಿ:ಗ್ರಾಮಾಯಣ: ಅಭ್ಯರ್ಥಿಯ ಚುನಾವಣಾ ಚಿಹ್ನೆಯೇ ಬದಲು!
ಈ ವಾರ್ಡ್‌ ನಲ್ಲಿ 2 ಸ್ಥಾನಗಳಿದ್ದು, 8 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಅಂಬಾರಾಯ ಶಿವರುದ್ರಪ್ಪ ಆಟೊ, ಕಲ್ಯಾಣರಾವ ಚಿತಾನಂದ ಟ್ರ್ಯಾಕ್ಟರ್, ಕಸ್ತೂರಿಬಾಯಿ ಸಾಯಬಣ್ಣ ಚಹಾ ಕಿಟ್ಲಿ, ಚನ್ನಮ್ಮ ದೇವಿಂದ್ರ ಬ್ಯಾಟರಿ (ಟಾರ್ಚ್), ಪ್ರಸಾದ ಶ್ರೀಮಂತ ಬಕೆಟ್, ಪುತಳಾಬಾಯಿ ಪಾಂಡಪ್ಪ ತೆಂಗಿನ ತೋಟ, ಹಾಗೂ ನಾಲ್ಕನೇ ಕ್ರಮ ಸಂಖ್ಯೆಯಲ್ಲಿರುವ ಗಜಾನಂದ ಅವರಿಗೆ ಹಲ್ಲುಜ್ಜುವ ಪೇಸ್ಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತ ಪತ್ರದಲ್ಲಿ ಹಲ್ಲುಜ್ಜುವ ಬ್ರಶ್ ಮುದ್ರಣಗೊಂಡಿದೆ.
ಇದನ್ನೂ ಓದಿ:ಗ್ರಾಮಾಯಣ: ಕಂಬೀಪುರ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದೇಕೆ?
ನಮ್ಮ ಪ್ರಕಾರ ಚಿಹ್ನೆ ಸರಿಯಾಗಿದೆ. ಫಾರಂ ಸಂಖ್ಯೆ 10 ರಲ್ಲಿ 139 ಹಲ್ಲುಜ್ಜುವ ಬ್ರಷ್ ಅಂತಲೆ ನಮೂದಾಗಿದೆ ಎಂದು ಮತಗಟ್ಟೆ ಅಧಿಕಾರಿ ತಿಳಿಸಿದ್ದಾರೆ. ಅಭ್ಯರ್ಥಿ ದೂರು ನೀಡಲಿ ಪರಿಶೀಲಿಸುತ್ತೇವೆ. ಚುನಾವಣೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ತಹಶೀಲ್ದಾರ್ ರಮೇಶ ಪೆದ್ದೆ ತಿಳಿಸಿದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಪೊಲೀಸರ ಜತೆಗೆ ಜಗಳಕ್ಕೇ ನಿಂತ್ರು ಜಿ.ಪಂ.ಸದಸ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + seven =
Remember me
