ಬೆಂಗಳೂರು:ರಾಜ್ಯ ಕಾಂಗ್ರೆಸ್​ ಸರ್ಕಾರ ವಿಧಾನಸಭೆ ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.
ವಾಣಿಜ್ಯ ಬಳಕೆ ಹೊರತುಪಡಿಸಿ ಪ್ರತಿ ಮನೆಗೆ 200 ಯೂನಿಟ್​ಗಳವರೆಗೆ ಉಚಿತ ವಿದ್ಯುತ್​ ನೀಡುವುದು ಗೃಹಜ್ಯೋತಿ ಯೋಜನೆಯ ಉದ್ದೇಶವಾಗಿದೆ. ಆದರೆ, ರಾಜ್ಯದ ಬಹುತೇಕ ಮನೆಗಳಲ್ಲಿ 200 ಯೂನಿಟ್​ ವಿದ್ಯುತ್​ ಬಳಸುವುದೇ ಇಲ್ಲ. ಹಾಗಾಂತ ಯದ್ವಾತದ್ವಾ ವಿದ್ಯುತ್​ ಬಳಸುವ ಆಗಿಲ್ಲ. ಏಕೆಂದರೆ, ಪ್ರತಿ ತಿಂಗಳು ಪ್ರತಿ ಕುಟುಂಬಗಳು ಬಳಸುವ ವಿದ್ಯುತ್​ ಯೂನಿಟ್​ ಮೇಲೆ ಹೆಚ್ಚುವರಿಯಾಗಿ ಶೇ. 10 ರಷ್ಟು ವಿದ್ಯುತ್ ಬಳಕೆ ಮಾತ್ರ ಅವಕಾಶ​ ನೀಡಲಾಗುತ್ತದೆ. ಅದಕ್ಕಿಂತ ಮಿತಿ ಮೀರಿದರೆ ಹೆಚ್ಚುವರಿ ವಿದ್ಯುತ್​ ಬಳಕೆಯ ಬಿಲ್​ ಕಟ್ಟಬೇಕು. ಅಲ್ಲದೆ, 200 ಯೂನಿಟ್​ಗಿಂತ ಹೆಚ್ಚು ಬಳಸಿದರೆ ಪೂರ್ತಿ ಬಿಲ್​ ಮೊತ್ತ ಪಾವತಿಸಬೇಕಾಗುತ್ತದೆ ಎಂದು ಇಂಧನ ಇಲಾಖೆ ಹೇಳಿದೆ.
ಇದನ್ನೂ ಓದಿ:ತಪ್ಪುಗ್ರಹಿಕೆಯಿಂದ 2 ದಿನದ ಅಂತರದಲ್ಲಿ ಪ್ರೇಮಿಗಳಿಬ್ಬರ ದುರಂತ ಸಾವು! ತಾಳ್ಮೆ ವಹಿಸಿದ್ದರೆ ಪ್ರೀತಿ ಉಳಿಯುತ್ತಿತ್ತು
ಅಂದಹಾಗೆ ಅರ್ಜಿ ಪ್ರಕ್ರಿಯೆ ತುಂಬಾ ಸರಳವಾಗಿದೆ. ಜನರು ಇಂಟರ್ನೆಟ್​ ಕೇಂದ್ರಗಳಲ್ಲಿ ಕ್ಯೂನಲ್ಲಿ ನಿಂತು ಪರದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮೊಬೈಲ್‌, ಕಂಪ್ಯೂಟರ್‌, ಲ್ಯಾಪ್‌ಟಾಪ್‌ ಜತೆಗೆ ಬೆಂಗಳೂರು ಒನ್‌, ಗ್ರಾಮ ಒನ್‌, ಕರ್ನಾಟಕ ಒನ್‌ ಕೇಂದ್ರ, ನಾಡಕಚೇರಿ ಸೇರಿದಂತೆ ಎಲ್ಲ ವಿದ್ಯುತ್‌ ಕಚೇರಿಗಳಲ್ಲೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಗ್ರಾಹಕರು ಸರ್ಕಾರದ ಸೇವಾಸಿಂಧು (https://sevasindhugs.karnataka.gov.in/gruhajyothi) ವೆಬ್​ಸೈಟ್​ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
ಗೃಹ ಜ್ಯೋತಿ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಬಳಿಕ ಮುಖಪುಟದಲ್ಲಿ “ಲಾಗಿನ್” ಅಥವಾ “ಸೈನ್ ಇನ್” ಆಯ್ಕೆಯನ್ನು ಪತ್ತೆ ಮಾಡಿ, ಲಾಗಿನ್​ ಬಟನ್​ ಮೇಲೆ ಕ್ಲಿಕ್​ ಮಾಡಬೇಕು. ಬಳಿಕ ಮೊಬೈಲ್​ ನಂಬರ್​ ಮೂಲಕ ಲಾಗಿನ್​ ಆದ ಬಳಿಕ ನಿಮ್ಮ ಗೃಹಜ್ಯೋತಿ ಯೋಜನೆಯ ಫೀಚರ್ಸ್​ ತೆರೆದುಕೊಳ್ಳುತ್ತದೆ. ಇದಾದ ಬಳಿಕ ನಿಮ್ಮ ರಿಜಸ್ಟ್ರೇಷನ್​ ಪ್ರಕ್ರಿಯೆ ಆರಂಭವಾಗುತ್ತದೆ. ಅದಕ್ಕಾಗಿ ಮೊದಲು ಗೃಹ ಜ್ಯೋತಿ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ವೆಬ್‌ಸೈಟ್‌ನಲ್ಲಿ ನೋಂದಣಿ ವಿಭಾಗವನ್ನು ಪತ್ತೆ ಮಾಡಿ, ನಿಖರವಾದ ವೈಯಕ್ತಿಕ ಮತ್ತು ವಿದ್ಯುತ್​ ಸಂಪರ್ಕ ವಿವರಗಳೊಂದಿಗೆ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಮನೆಯ ಪುರಾವೆಯಾಗಿ ನಿಮ್ಮ ವಿದ್ಯುತ್ ಬಿಲ್ ಒದಗಿಸಬೇಕು. ಪೂರ್ಣಗೊಂಡ ನೋಂದಣಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಿ. ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ಮತ್ತು ಅನುಮೋದನೆಗಾಗಿ ನಿರೀಕ್ಷಿಸಬೇಕು. ಅನುಮೋದಿಸಿದ ನಂತರ, ನಿಮ್ಮ ನೋಂದಣಿಯ ದೃಢೀಕರಣವನ್ನು ನೀವು ಮತ್ತೆ ಸ್ವೀಕರಿಸುತ್ತೀರಿ. ಸ್ವೀಕರಿಸಿದ ಬಳಿಕ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಆರಂಭವಾಗುತ್ತದೆ.
ಇದನ್ನೂ ಓದಿ:ಮರಳು ದಂಧೆಕೋರರಿಂದ ಹೆಡ್​ ಕಾನ್​ಸ್ಟೆಬಲ್ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್​
ಯೋಜನೆಯಲ್ಲಿ ಯಾವುದಾದರೂ ಗೊಂದಲಗಳಿದ್ದರೆ, ಅದನ್ನು ತಕ್ಷಣ ಬಗೆಹರಿಸಲು ಸಹಾಯವಾಣಿಯನ್ನು ತೆರೆಯಲಾಗಿದೆ. ಯೋಜನೆ ಹಾಗೂ ಅರ್ಜಿ ಸಲ್ಲಿಕೆ ಸಂಬಂಧ ಯಾವುದೇ ಗೊಂದಲಗಳಿದ್ದರೂ ಹೆಚ್ಚಿನ ಮಾಹಿತಿಗೆ 24/7 ಸೇವೆಯ 1912 ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿhttps://sevasindhugs.karnataka.gov.in/gruhajyothiಗೆ ಭೇಟಿ ನೀಡಬಹುದು ಎಂದು ಇಂಧನ ಇಲಾಖೆ ತಿಳಿಸಿದೆ.
ಪ್ರತಿ ಮನೆಗೂ ಉಚಿತ ವಿದ್ಯುತ್, ಗೃಹಜ್ಯೋತಿ ಯೋಜನೆ ಜಾರಿಗೂ ಆದೇಶ: ಷರತ್ತುಗಳ ವಿವರ ಇಲ್ಲಿದೆ..

ನಟ ವಿಜಯ್​ ರಾಜಕೀಯ ಪ್ರವೇಶ ವಿಚಾರ: ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
