ಮೈಸೂರು:ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಆ.30) ಚಾಲನೆ ನೀಡಿದರು. ಖರ್ಗೆ ಅವರಿಗೆ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಅವರು ಸಾಥ್​ ನೀಡಿದರು.
ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಸಮಾರಂಭದಲ್ಲಿ ರಿಮೋಟ್​ ಬಟನ್​ ಒತ್ತುವ ಮೂಲಕ 2000 ರೂಪಾಯಿ ಚೆಕ್​ ಪ್ರದರ್ಶನ ಮಾಡುವುದರೊಂದಿಗೆ ಗೃಹಲಕ್ಷ್ಮಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕೃತ ಚಾಲನೆ ನೀಡಿದರು.
ಸರ್ಕಾರ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಸಂದರ್ಭದಲ್ಲಿ ಸರ್ಕಾರದ ನೂರು ದಿನ ಆಡಳಿತದ ಪುಸ್ತಕವನ್ನು ಕಾಂಗ್ರೆಸ್​ ನಾಯಕರು ಬಿಡುಗಡೆ ಮಾಡಿದರು. ಫಲಾನುಭವಿ ಮಹಿಳೆಯರಿಗೆ ಡಿಬಿಟಿ‌ ಮೂಲಕ ಖರ್ಗೆ ಮತ್ತು ರಾಹುಲ್​ ಗಾಂಧಿ ಅವರು ಹಣ ವರ್ಗಾವಣೆ ಮಾಡಿದರು.
ಇದನ್ನೂ ಓದಿ:VIDEO| ರಕ್ಷಾ ಬಂಧನ 2023: ಪ್ರಧಾನಿ ನರೇಂದ್ರ ಮೋದಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು
ಇದಕ್ಕೂ ಮುನ್ನ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್​ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಸಚಿವರುಗಳು ಹಾಗೂ ಸ್ಥಳೀಯ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಮಹಾರಾಜ ಕಾಲೇಜು ಆವರಣ ವೇದಿಕೆಗೆ ಆಗಮಿಸಿದರು. ವೇದಿಕೆಗೆ ಆಗಮಿಸಿದ ರಾಹುಲ್​ ಜನರತ್ತ ಕೈ ಬೀಸಿದರು.
ಬಳಿಕ ನಾಡಗೀತೆ ಹಾಡುವುದರೊಂದಿಗೆ ಹಾಗೂ ದೀಪ ಬೆಳಗುವ ಮೂಲಕ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಚಿವ ಮಹಾದೇವಪ್ಪ ಅವರು ಸಂವಿಧಾನದ ಪೀಠಿಕೆಯನ್ನು ಬೋಧನೆ ಮಾಡಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ‌ ಜನರಲ್ ಸೆಕ್ರೆಟರಿ ವೇಣುಗೋಪಾಲ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ಮುನಿಯಪ್ಪ, ಪರಮೇಶ್ವರ್, ಸತೀಶ್ ಜಾರಕಿಹೋಳಿ, ಕೆ.ಎನ್. ರಾಜಣ್ಣ, ಮಹಾದೇವಪ್ಪ, ಚಲುವರಾಯಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯು ಮನೆ ಯಜಮಾನಿಗೆ ಉಚಿತ ಹಣ ನೀಡುವ ಯೋಜನೆಯಾಗಿದೆ. ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರೋ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈ ಯೋಜನೆ ಅಡಿಯಲ್ಲಿ ಪ್ರತಿ ಮನೆಯ ಯಜಮಾನಿಗೆ 2000 ರೂ. ನೀಡಲಾಗುತ್ತದೆ. ಒಂದೇ ಮನೆಯಲ್ಲಿ ಅತ್ತೆ-ಸೊಸೆ ಇದ್ದಲ್ಲೆ, ಮನೆಯ ಯಜಮಾನಿ ಯಾರು ಎಂಬುದನ್ನು ಅವರೇ ತೀರ್ಮಾನ ಮಾಡಿಕೊಳ್ಳಬೇಕು. ಈಗಾಗಲೇ 1.28 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಇಂದು ಎಲ್ಲರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ.
ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಯುವಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳಿಗೆ ಅದ್ಧೂರಿ ಚಾಲನೆ ದೊರೆತಿದೆ. ಇಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕಿದೆ. ಉಳಿದ ಯುವನಿಧಿ ಯೋಜನೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ.
ರಕ್ಷಾ ಬಂಧನ 2023: ಉಜ್ಜಯಿನಿಯ ಮಹಾಕಾಲ ದೇವರಿಗೆ ಮೊದಲು ರಾಖಿ ಕಟ್ಟಿ 1.25 ಲಕ್ಷ ಲಡ್ಡು ಅರ್ಪಣೆ

ಅನುಮಾನಾಸ್ಪದ ಸ್ಥಿತಿಯಲ್ಲಿ ಅಕ್ಕ ಸಾವು,ತಂಗಿ ಪರಾರಿ; ಸಂಚಲನ ಮೂಡಿಸಿದ ಸಹೋದರಿಯರ ಪ್ರಕರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eight =
Remember me
