ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯೂಜೆ) ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಕೆಯುಡಬ್ಲ್ಯೂಜೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಮತ್ತು ಹಿರಿಯ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ಆಯ್ಕೆ ಮಾಡಲಾಗಿದೆ.
ವಿಜಯ ಕರ್ನಾಟಕ, ಉಷಾಕಿರಣ, ಕಸ್ತೂರಿ ಟಿವಿ, ಸುವರ್ಣ ನ್ಯೂಸ್, ಉದಯವಾಣಿ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ಕ್ರೀಯಾಶೀಲವಾಗಿ ಕೆಲಸ ಮಾಡಿರುವ ಶಂಕರ ಪಾಗೋಜಿ ಅವರು ತಮ್ಮ ಅಂಕಣ ಮೂಲಕ ಉತ್ತರ ಕರ್ನಾಟಕ ಭಾಗದ ಭಾಷೆಯನ್ನು ಸಮರ್ಥವಾಗಿ ದುಡಿಸಿಕೊಂಡವರು. ಗುರುಲಿಂಗ ಸ್ವಾಮಿ ಹೊಳಿಮಠ ಅವರ ಬಳಗದ ಅಭಿಲಾಷೆಯನ್ನು ಪರಿಗಣಿಸಿ, ಪಾಗೋಜಿ ಅವರ ಸೇವೆಯನ್ನು ಸ್ಮರಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ವಿಜಯಪುರದಲ್ಲಿ ಫೆಬ್ರವರಿ 4 ಮತ್ತು 5 ರಂದು ನಡೆಯಲಿರುವ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುಲಿಂಗ ಸ್ವಾಮಿ ಹೊಳಿಮಠ ಹೆಸರಿನ ದತ್ತಿನಿಧಿಗೆ ಚಾಲನೆ ನೀಡಿ, ಇದೇ ಸಂದರ್ಭದಲ್ಲಿ ಮೊದಲ ಪ್ರಶಸ್ತಿಗೆ ಭಾಜನರಾಗಿರುವ ಶಂಕರ ಪಾಗೋಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು.
ಪ್ರಶಸ್ತಿ ಹಿನ್ನೆಲೆ:ಸುದ್ದಿ ಮೂಲ, ವಿಜಯ ಕರ್ನಾಟಕ, ಈ ಟಿವಿ, ಟಿವಿ 5, ವಿಜಯವಾಣಿ ಸೇರಿದಂತೆ ಹಲವು ಮಾಧಮಗಳಲ್ಲಿ ಕ್ರಿಯಾಶೀಲ ಪತ್ರಕರ್ತರಾಗಿ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾಗಿಯೂ ಸೇವೆ ಸಲ್ಲಿಸಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಸ್ನೇಹ ಜೀವಿ ಮತ್ತು ಸಹೃದಯಿ. ಅವರ ಸಾವು ಅರಗಿಸಿಕೊಳ್ಳಲಾಗದ ಸಂಗತಿ. ಅವರ ಸೇವೆಯನ್ನು ಸ್ಮರಿಸಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ದತ್ತಿ ನಿಧಿ ಸ್ಥಾಪಿಸಿದೆ. ಇತ್ತೀಚೆಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
VIDEO | ಆಟೋರಿಕ್ಷಾ ಚಾಲಕರಿಗೆ ಇದೊಂಥರಾ ವಿಚಿತ್ರ ಸ್ಪರ್ಧೆ!

ಕ್ಷೇತ್ರದ ಮತದಾರರಿಗೆ ಆಮಿಷ: ಬಿಜೆಪಿಗೆ ಅಸ್ತ್ರವಾದ ಕಾಂಗ್ರೆಸ್​ ನಾಯಕ ರಾಮಲಿಂಗ ರೆಡ್ಡಿ ಕುಕ್ಕರ್​ ಹಂಚುವ ವಿಡಿಯೋ

ವಿಶ್ವದ ಮೊದಲ ಹಾಗೂ ತನ್ನದೇಯಾದ ಕರೊನಾ ಮೂಗಿನ ಲಸಿಕೆ ಬಿಡುಗಡೆ ಮಾಡಿದ ಭಾರತ: 1 ಡೋಸ್​ಗೆ 800 ರೂ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
