ರಾಮನಗರ:ರಾಜ್ಯ ಸರ್ಕಾರವು ನಾನು ಕೊಟ್ಟ ಅನುದಾನಗಳನ್ನು ಸ್ಥಗಿತಗೊಳಿಸಿದೆ, ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದ ಕೈಲಾಂಚದ​ಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, “ನಾನು ಮುಖ್ಯಮಂತ್ರಿಯಾಗಿದ್ದಾಗ ಕೊಟ್ಟಿರುವ ಎಲ್ಲ ಅನುದಾನಗಳನ್ನು ಸ್ಥಗಿತಗೊಳಿಸಲಾಗಿದೆ. ಅನುದಾನಗಳ ಕಡಿತದ ಬಗ್ಗೆ ಆಯಾ ಇಲಾಖೆಯ ಸಚಿವರು, ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅದರ ಎಲ್ಲ ಫೈಲ್​ಗಳು ಸಿಎಂ ಬಳಿ ಇದೆ. ಅವರು ಅದಕ್ಕೆ ಸಹಿ ಹಾಕಬೇಕಷ್ಟೇ. ಅವರು ಯಾವಾಗ ಆ ಫೈಲ್​ಗಳಿಗೆ ಸಹಿ ಹಾಕುತ್ತಾರೋ ಎಂದು ಕಾಯುತ್ತಿದ್ದೇನೆ.” ಎಂದು ಹೇಳಿದ್ದಾರೆ.
ತಮ್ಮ ಪಕ್ಷದ ಬಗ್ಗೆ ಮಾತನಾಡಿರುವ ಅವರು, ನಮ್ಮ ಜೆಡಿಎಸ್​ ಪಕ್ಷ ಯಾವಾಗಲೂ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಡಿದೆ. 2008ರಲ್ಲೂ ನಮಗೆ ಬಿಜೆಪಿ ಸರ್ಕಾರದಿಂದ ತೊಂದರೆಯಾಗಿತ್ತು. ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿಯಿಂದ ಯಾವುದೇ ಸಹಕಾರವಿರಲಿಲ್ಲ. ಈಗಲೂ ಅದೇ ರೀತಿ ಆಗುತ್ತಿದೆ. ಮುಂದೆ ಏನು ಮಾಡುತ್ತಾರೋ ಕಾದು ನೋಡೋಣ ಎಂದು ಹೇಳಿದ್ಧಾರೆ.
ಪಕ್ಷವನ್ನು ದೇವೇಗೌಡರ ನೇತೃತ್ವದಲ್ಲಿಯೇ ಮುಂದುವರಿಸುವುದಾಗಿ ತಿಳಿಸಿರುವ ಅವರು ಬಿಜೆಪಿಯ ದ್ವೇಷ ರಾಜಕಾರಣದ ಬಗ್ಗೆ ವಿಧಾನಸಭೆಯ ಕಲಾಪದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
