ಮೈಸೂರು:ಕಾಂಗ್ರೆಸ್ ಮತ್ತು ಬಿಜೆಪಿಯ ಮಗು ಜೆಡಿಎಸ್. ಮಿಠಾಯಿ ತೋರಿಸಿದವರ ಕಡೆ ಆ ಪಕ್ಷ ಹೋಗುತ್ತೆ ಎಂದು ಎಂಎಲ್‌ಸಿ ಅಡಗೂರು ಎಚ್.ವಿಶ್ವನಾಥ್ ಲೇವಡಿ ಮಾಡಿದರು.
ವಿಧಾನ ಪರಿಷತ್​ ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆಗೆ ಜೆಡಿಎಸ್ ಬೆಂಬಲ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್​, ಎಲ್ಲಿ ಮಿಠಾಯಿ ಸಿಗುತ್ತೋ ಅಲ್ಲಿಗೆ ಜೆಡಿಎಸ್​ ಹೋಗುತ್ತೆ. ಪಾಪ ಅದರ ಬಗ್ಗೆ ಏನ್ ಮಾತಾಡೋದು ಬಿಡಿ ಎಂದು ವ್ಯಂಗ್ಯವಾಡಿದರು.
ಪರಿಷತ್‌ನಲ್ಲಿ ಸದಸ್ಯರ ಗೂಂಡಾಗಿರಿ ಕುರಿತು ಮಾತನಾಡಿದ ವಿಶ್ವನಾಥ್​, ಸಾರ್ವಭೌಮತ್ವದ ಹೆಬ್ಬಾಗಿಲು ಪಾರ್ಲಿಮೆಂಟ್‌ಗೆ ಪ್ರಧಾನಿ ನರೇಂದ್ರ ಮೋದಿ ನಮಸ್ಕರಿಸುತ್ತಾರೆ. ಅಂತಹ ಸಾರ್ವಭೌಮತ್ವದ ಸದನದ ಬಾಗಿಲನ್ನು ಬೂಟು ಕಾಲಲ್ಲಿ ಒದೆಯುತ್ತಾರೆ. ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ದೊಡ್ಡದೊಡ್ಡವರೇ ನಿನ್ನೆ ಆ ಗೌರವವನ್ನು ಕೊಚ್ಚಿ ಹಾಕಿದ್ರು.
ಪ್ರತಾಪ್‌ಚಂದ್ರಶೆಟ್ಟಿ ನಾನು ತುಂಬಾ ವರ್ಷಗಳ ಸ್ನೇಹಿತರು. ಬಹಳ ಸ್ವಾಭಿಮಾನಿ‌ ವ್ಯಕ್ತಿ ಪ್ರತಾಪ್‌ಚಂದ್ರಶೆಟ್ಟಿ. ಒಂದು ತಿಂಗಳ‌ ಹಿಂದೆಯೇ ರಾಜೀನಾಮೆ ಕೊಡ್ತೀನಿ ಅಂತ ಹೇಳಿದ್ರು. ಆದ್ರೆ ನಾವೆಲ್ಲ ಪಕ್ಷದ ನಿಯಂತ್ರಣದಲ್ಲಿದ್ದೀವಿ. ಬಹಳ ನೋವಿನ ಸಂಗತಿ ಇದು. ಇದು ಆಗ್ಬಾರ್ದು. ಈ ಘಟನೆಯಿಂದ ನಾಡಿನ ಜನತೆಗೆ ನೋವಾಗಿದೆ. ನಾಡಿನ ಜನತೆ ಬಳಿ ಕ್ಷಮೆ ಕೋರುತ್ತೇನೆ ಎಂದರು.
ಗ್ರಾ.ಪಂ.ಗೆ ಪತ್ನಿ ಅವಿರೋಧ ಆಯ್ಕೆ, ಸಂಭ್ರಮದಲ್ಲಿದ್ದ ಪತಿ ಮರುದಿನವೇ ಆತ್ಮಹತ್ಯೆ! ಕಾರಣ ಏನು?

ಬೈಕ್​ನಲ್ಲಿ ಕುಳಿತು ನಿದ್ರೆಗೆ ಜಾರಿದ ತಾಯಿ-ಮಕ್ಕಳು ತರಗೆಲೆಯಂತೆ ರಸ್ತೆಗೆ ಉರುಳಿದರು! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ಸಚಿವ-ಸಂಸದ-ಜಿಲ್ಲಾಧಿಕಾರಿಯನ್ನೇ ‘ಬೋ…ಮಗ’ ಎಂದ ಕಾಂಗ್ರೆಸ್​ ಶಾಸಕ! ಆಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 5 =
Remember me
