ಬೆಂಗಳೂರು:ಕರೊನಾ ಸಮಯದಲ್ಲಿ ಎಚ್1ಎನ್1 ನಿಯಂತ್ರಣಕ್ಕೆ ಬಂದಿದ್ದು, 3 ತಿಂಗಳಿ ನಿಂದ ಪ್ರಕರಣಗಳು ವರದಿಯಾಗಿಲ್ಲ. ಪ್ರತಿ ವರ್ಷ ಮಳೆಗಾಲ ಬಂತೆಂದರೆ, ಸಾವಿರಾರು ಮಂದಿ ಎನ್1ಎನ್1 ಸೋಂಕಿನಿಂದ ಬಳಲುತ್ತಿದ್ದರು. ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದರು. ಹತ್ತು ವರ್ಷಗಳಲ್ಲಿ ರಾಜ್ಯದಲ್ಲಿ 15,119 ಮಂದಿ ಎಚ್1ಎನ್1 ಬಾಧಿತರಾಗಿದ್ದು, 532 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ವರ್ಷ 2,030 ಮಂದಿ ಕಾಡಿದ್ದ ಸೋಂಕು 96 ಜನರನ್ನು ಬಲಿ ಪಡೆದಿತ್ತು.
ವರ್ಷದ ಆರಂಭದಲ್ಲಿ ಅಂದರೆ ಮೊದಲ 3 ತಿಂಗಳಲ್ಲಿ 400ಕ್ಕೂ ಹೆಚ್ಚು ಮಂದಿಯಲ್ಲಿ ಎಚ್1ಎನ್1 ಕಾಣಿಸಿಕೊಂಡಿದ್ದು, ಮೂವರು ಮೃತಪಟ್ಟಿದ್ದರು. ನಂತರದಲ್ಲಿ ಕೆಲ ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 458 ತಲುಪಿತ್ತು. ಮಳೆಗಾಲ ಆರಂಭದೊಂದಿಗೆ ಈ ಪ್ರಕರಣಗಳು ಮತ್ತಷ್ಟು ಏರುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಅಂದಾಜಿಸಿತ್ತು. ಹೀಗಾಗಿ ಇಲಾಖೆ ಸಂಬಂಧಿಪಟ್ಟ ಅಧಿಕಾರಿಗಳಿಗೆ ಎಚ್1ಎನ್1 ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮದೊಂದಿಗೆ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿತ್ತು.
ನಿಯಮಗಳಿಂದ ನಿಯಂತ್ರಣ: ಕೋವಿಡ್-19ರ ನಿಯಂತ್ರಣಕ್ಕಾಗಿ ಸರ್ಕಾರ ಹೇರಿದ ಲಾಕ್​ಡೌನ್ ಹಾಗೂ ಕರೊನಾ ಬಗ್ಗೆ ಜನರಲ್ಲಿ ಮೂಡಿರುವ ಭೀತಿಯಿಂದಾಗಿ ಎಚ್1ಎನ್1 ಸೋಂಕು ಕಡಿಮೆಯಾಗಿದೆ. ಕೋವಿಡ್ ಭೀತಿಯಿಂದ ಜನರು ಪರಸ್ಪರ ಅಂತರ ಕಾಯ್ದುಕೊಳ್ಳುತ್ತಿರುವುದು, ಮಾಸ್ಕ್ ಧರಿಸಿ ಓಡಾಡುತ್ತಿರುವುದು, ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಇದಕ್ಕೆ ಕಾರಣ. ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ಎಲ್ಲೆಡೆ ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛತೆಗೆ ಆದ್ಯತೆ ನೀಡಿದ್ದೂ ಸೋಂಕು ಕಡಿಮೆಯಾಗಿದೆ ಎನ್ನುತ್ತಾರೆ ಇಲಾಖೆ ಅಧಿಕಾರಿಗಳು.
ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಮೋದಿ ಸಜ್ಜು; ಭೌತಿಕ ತರಗತಿಗಳೇ ಇರಲ್ಲ, ಆನ್​ಲೈನ್​ ಕ್ಲಾಸ್​ಗಳೇ ಎಲ್ಲ….!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 + six =
Remember me
