ಹಾವೇರಿ:ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದ್ದ ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣದ 10 ಜನ ಆರೋಪಿತರಿಗೆ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ.
ಇದನ್ನೂ ಓದಿ:ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ್‌!
ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ 7 ಪ್ರಮುಖ ಆರೋಪಿಗಳು ಸೇರಿ ಒಟ್ಟು 19 ಆರೋಪಿಗಳನ್ನು ಹಾನಗಲ್ಲ ಪೊಲೀಸರು ಬಂಧಿಸಿದ್ದರು. ಈ ಪೈಕಿ ಹೈಕೋರ್ಟ್ ನೀಡಿದ ತೀರ್ಪಿನ ಮೇರೆಗೆ ಹಾವೇರಿ ಸಬ್ ಜೈಲಿನಿಂದ 10 ಜನ ಆರೋಪಿಗಳನ್ನು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಜಾಮೀನು ಪಡೆದ 10 ಆರೋಪಿಗಳು ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಮೇಲೆ ಹಲ್ಲೆ, ಅಪಹರಣ, ಅತಿಕ್ರಮ ಪ್ರವೇಶ ಮತ್ತು ಹತ್ಯೆಗೆ ಯತ್ನಿಸಿದ ಆರೋಪಗಳನ್ನು ಎದುರಿಸುತ್ತಿರುವ ಕಾರಣ ಅವರಿಗೆ ಜಾಮೀನು ನೀಡಲಾಗಿದೆ. ಕಳೆದ ಜ. 8ರಂದು ನಡೆದ ಪ್ರಕರಣದಲ್ಲಿ ಸಂತ್ರಸ್ತೆಯ ಮೇಲೆ ಆರೋಪಿಗಳು ಅತ್ಯಾಚಾರ ಮಾಡಿಲ್ಲ. ಆದರೆ, ಅವರು ಅಪರಾಧ ಮಾಡಲು ಬೆಂಬಲಿಸಿದ್ದಾರೆ ಎಂದು ಪೊಲೀಸರು ಮಾ. 5ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ರೋಷಾರೋಪ ಪಟ್ಟಿಯಲ್ಲಿ ತಿಳಿಸಿದ್ದರು ಎನ್ನಲಾಗಿದೆ.
9 ಜನರಿಗೆ ಜೈಲೂಟವೇ ಗತಿ:ಸಾಮೂಹಿಕ ಅತ್ಯಾಚಾರದ ಪ್ರಮುಖ ಆರೋಪಿಗಳಲ್ಲಿ ಅಫ್ತಾಬ್ ಚಂದನಕಟ್ಟೆ (ಎ-1), ಮದರಸಾಬ್ ಮಂಡಕ್ಕಿ (ಎ-2) ಸೇರಿ 7 ಜನ ಪ್ರಮುಖ ಆರೋಪಿಗಳು ಹಾಗೂ ಇನ್ನೂ ಇಬ್ಬರು ಸೇರಿ ಒಟ್ಟು 9 ಆರೋಪಿಗಳು ಜೈಲಿನಲ್ಲಿದ್ದಾರೆ ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ.
ಶಾಲಾ‌‌ ಮಕ್ಕಳ ಕೂದಲು ಕಟ್ ಮಾಡಿದ‌ ಶಿಕ್ಷಕನಿಗೆ ಬಿತ್ತು ಧರ್ಮದೇಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + seventeen =
Remember me
