ಚನ್ನರಾಯಪಟ್ಟಣ:ಟೌನ್ ಸಬ್ ಇನ್ಸ್​ಪೆಕ್ಟರ್​ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿ ಕೊಂಡು ಮೃತರಾಗಿದ್ದು, ಪೊಲೀಸ್​ ಇಲಾಖೆಯಲ್ಲಿ ಆತಂಕ ಮನೆ ಮಾಡಿದೆ.
ದಕ್ಷತೆಗೆ ಹೆಸರಾಗಿದ್ದ ಕಿರಣ್​ ಅರಸಿಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ಲಾಳಿನಕೆರೆ ಗ್ರಾಮದವರು. ಇಂದು ವರಮಹಾಲಕ್ಷ್ಮಿ ಹಬ್ಬ ಇದ್ದಿದ್ದರಿಂದ ಇವರ ಪತ್ನಿ ತನ್ನ ತಂದೆ ಮನೆಗೆ ಹೋಗಿದ್ದರು. ಕಿರಣ್​ ಸಹ ಮಾವನ ಮನೆಗೆ ಹೋಗಿ ಬೆಳಗ್ಗೆ ಉಪಹಾರ ತಿಂದು ಬಂದು ತಾವು ವಾಸವಿದ್ದ ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೂಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಅಂಬೇಡ್ಕರ್​ಗೆ ಊಟ ಬಡಿಸಿದ್ದ ಬೆಳಗಾವಿಯ ಅಜ್ಜಿ ಸಿದ್ದವ್ವ ಮೇತ್ರಿ ನಿಧನ
ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಎರಡು ಕೊಲೆಗಳಾಗಿದ್ದು ಒತ್ತಡ ತಾಳಲಾರದೆ ಆತ್ಮ ಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ. ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ಹಾಸನ ಎಸ್ಪಿ ಶ್ರಿನಿವಾಸ್ ಗೌಡ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ಮಾಡಿದ್ದಾರೆ. ಇಡೀ ಪೊಲೀಸ್ ವರ್ಗ ಕಿರಣ್ ಸಾವಿಗೆ ಕಂಬನಿ ಮಿಡಿದಿದೆ.(ದಿಗ್ವಿಜಯ ನ್ಯೂಸ್​)
ಚನ್ನರಾಯಪಟ್ಟಣ ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
