ಬೆಂಗಳೂರು:ಮಂಗಳೂರು ಗಲಭೆಗೆ ಸಂಬಂಧಿಸಿದ್ದು ಎಂದು ಹೇಳಿ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ವಿಡಿಯೋಗಳಿಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಟೀಕಾಪ್ರಹಾರ ನಡೆಸಿದ ಬೆನ್ನಲ್ಲೇ ಎಚ್​ಡಿಕೆ ಸರಣಿ ಟ್ವೀಟ್​ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
“ಅದಕ್ಕೆಲ್ಲಾ ಅರ್ಥ ಇದೆಯೇನ್ರಿ, ಅದೆಲ್ಲಾ ಕಟ್ ಆ್ಯಂಡ್​ ಪೇಸ್ಟ್ ವೀಡಿಯೋ” ಎಂದು ಸಿಎಂ ಹೇಳಿದ್ದಾರೆ. ಸಿಡಿ ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಬಿಜೆಪಿ ನಾಯಕರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ. ಸಿಡಿಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿಕೊಳ್ಳುವ ಧೈರ್ಯ ನಿಮಗಿದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ ‘ಸಿಡಿ’ಯನ್ನು ನೀವು ಸೃಷ್ಟಿಸಿಕೊಂಡಂತೆ ‘ಕಟ್ ಅಂಡ್ ಪೇಸ್ಟ್’ ಬಿಜೆಪಿ ಸರ್ಕಾರ ಎಂದುಕೊಂಡಿರಾ? ಎಂದು ತಿರುಗೇಟು ನೀಡಿದ್ದಾರೆ.
ಸ್ಥಿಮಿತ ಉಳಿದಿದೆಯೇ ಸವದಿ?ಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ ಆರೋಪಿಸಿದ್ದಾರೆ. ಸರಿ… ಹಾಗಾದರೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ ಚಿತ್ರ ನೋಡಿದರು? ಈ ಬಾರಿ ಅವರು ಯಾವ ಚುನಾವಣೆ ಗೆದ್ದಿದ್ದಾರೆ? ಸ್ಥಿಮಿತ ಉಳಿದಿದೆಯೇ? ಎಂದು ಸಚಿವ ಸವದಿಯವರನ್ನು ಪ್ರಶ್ನಿಸಿದ್ದಾರೆ.
ಗೋಲಿಬಾರ್​ಗಳು ಯಾಕೆ ಆಗಲಿಲ್ಲ?ಪೊಲೀಸರು ಗಲಭೆ ಮಾಡುವುದಿಲ್ಲ, ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೋಲೀಸರೇ ಇದ್ದರು ಎಂದಿದ್ದಾರೆ ಗೃಹ ಸಚಿವ. ಬೊಮ್ಮಾಯಿ ಅವರೇ ಅದು ನನ್ನ ಕಾಲ. ಶಾಂತಿ-ಸುವ್ಯವಸ್ಥೆಗಷ್ಟೇ ಪೊಲೀಸರ ಸೇವೆ ಪಡೆಯುತ್ತಿದ್ದೆವು. ಇದು ನಿಮ್ಮ ಕಾಲ. ಗಲಭೆ, ಗುಂಡೇಟಿಗೆ ನೀವು ಪೊಲೀಸರನ್ನು ಬಳಸಿಕೊಳ್ಳುತ್ತಿದ್ದೀರಿ. ನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್​ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರಾ? ಎಂದು ಸವಾಲು ಹಾಕಿದ್ದಾರೆ.
ಸಿಡಿ ಬಗ್ಗೆ ಮಾತಾಡುವಾಗ ಎಚ್ಚರವಾಗಿರಲಿಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ. ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ ಎಂದು ಎಚ್ಚರಿಸಿದ್ದಾರೆ.
ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ ‘ಶಾಂತಿ’ಯೇ?ಮಂಗಳೂರು ಶಾಂತಿಯಿಂದಿದೆ, ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಸೋದರಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳೂರಿನ ಭಿನ್ನ ಧ್ವನಿಗಳ ಕೊರಳು ಬಿಗಿ ಹಿಡಿದು, ಉಸಿರುಗಟ್ಟಿಸಿ, ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ ‘ಶಾಂತಿ’ಯೇ? ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ, ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ? ಎಂದು ಪ್ರಶ್ನಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.
ಶಾಂತಿ ಸ್ಥಾಪನೆಯಾಗಬೇಕಿದ್ದರೆ ಬಿಜೆಪಿ ತೆಪ್ಪಗಿರಬೇಕಷ್ಟೇಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬೇಕಿಲ್ಲ. ಅಲ್ಲಿ ರಾಜಕಾರಣ ಮಾಡುತ್ತಿರುವುದು ನೀವು. ಅಲ್ಲಿ ಕೋಮು ಗಲಭೆ ಉಂಟು ಮಾಡುತ್ತಿರುವುದು ನೀವು. ವಾಣಿಜ್ಯ ನಗರಿಯಾಗಬೇಕಿದ್ದ ಮಂಗಳೂರು ಕೋಮು ರಾಜಕಾರಣದ ಕಣವಾಗಿದ್ದು‌ ಬಿಜೆಪಿಯಿಂದ. ಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ, ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು, ಇದೆ. ದೇಶಕ್ಕೆ ದೊಡ್ಡ ಬ್ಯಾಂಕ್​ಗಳನ್ನು ಕೊಟ್ಟದ್ದು ಇದೇ ಕರಾವಳಿ. ಆದರೆ ನಿಮ್ಮ ಚಿಲ್ಲರೆ ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ. ಮಂಗಳೂರು ಶಾಂತವಾದರೆ ಅದು ವಾಣಿಜ್ಯಿಕವಾಗಿ ಬೆಳವಣಿಗೆಯಾಗುತ್ತದೆ. ದೇಶಕ್ಕೆ ಮಾದರಿಯಾಗುವ ತನ್ನ ಐತಿಹಾಸಿಕ ಗುಣವನ್ನು ಮುಂದುವರಿಸಿಕೊಂಡು ಹೋಗುತ್ತದೆ. ಶಾಂತಿ ಸ್ಥಾಪನೆಯಾಗಬೇಕಿದ್ದರೆ ಬಿಜೆಪಿ ತೆಪ್ಪಗಿರಬೇಕಷ್ಟೇ. ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬಾರದು ಎನ್ನುತ್ತಾರೆ ಸೋದರಿ ಶೋಭಾ. ಆದರೆ, ರಾಜಕೀಯ ಪಕ್ಷವೊಂದರ ಶಾಸಕಾಂಗ ಪಕ್ಷದ ನಾಯಕನಾದ ನಾನು ಮಂಗಳೂರಲ್ಲಿ ಏಕೆ ರಾಜಕಾರಣ ಮಾಡಬಾರದು? ಹಾಗೇನಾದರೂ ನನಗೆ ನಿರ್ಬಂಧವಿದೆಯೇ? ಮಂಗಳೂರಲ್ಲಿ ನಾನೂ ರಾಜಕಾರಣ ಮಾಡುತ್ತೇನೆ. ಆದರೆ ಬಿಜೆಪಿಯಂತಲ್ಲ. ಸಾತ್ವಿಕವಾಗಿ‌ ಎಂದು ಸರಣಿ ಟ್ವೀಟ್​ ಮೂಲಕ ಎಲ್ಲ ಆರೋಪಗಳಿಗೆ ಉತ್ತರಿಸಿ, ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + twelve =
Remember me
