ಬೆಂಗಳೂರು:ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಎಚ್.ಡಿ. ಕುಮಾರಸ್ವಾಮಿ, ಅಂಕೆ ಮೀರಿದ ಭಂಡತನಕ್ಕೆ ಸಿದ್ದರಾಮಯ್ಯ ಅವರೇ ನೀವೇ ಅತ್ಯುತ್ತಮ ಉದಾಹರಣೆ ಎಂದಿದ್ದಾರೆ.
ಇದನ್ನೂ ಓದಿ:ಎನ್​ಡಿಎಗೆ ಮರಳಿದ ನಿತೀಶ್!​ ‘ಪಲ್ಟು ರಾಮ್’ ಅಂತ ಕರೆಯೋದು ಸರಿಯಲ್ಲ ಎಂದ ಕೇಂದ್ರ ಸಚಿವ
“ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ. ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ ಎಂದು ನೀವು ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ. ಹೌದಲ್ಲವೇ?” ಎಂದರು.
“ಎರಡನೇ ಸಲ ಸಿಎಂ ಆಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ, ಸರಿ. ಆದರೆ, ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ? ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಬಿಗ್​ಬಾಸ್​​ ವಿನ್ನರ್​ಗೆ 50 ಲಕ್ಷ ರೂ. ಜತೆಗೆ ಸಿಗ್ತು ಐಷಾರಾಮಿ ಕಾರು; 6 ಫೈನಲಿಸ್ಟ್​ಗಳಿಗೂ ಸಿಗ್ತು ಲಕ್ಷ..ಲಕ್ಷ ಹಣ
“ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ” ಎಂದು ಕಿಡಿಕಾರಿದರು.
“ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು. ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ? ಇನ್ನು ಆ ನಿಮ್ಮ ಭಾಷಣ! ಅದನ್ನು ಭಾಷಣ ಎನ್ನಲು ಸಾಧ್ಯವೇ?ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ! ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು! ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು?” ಎಂದಿದ್ದಾರೆ.
ಇದನ್ನೂ ಓದಿ:ವಿಜಯವಾಣಿ-ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಐತಿಹಾಸಿಕ ಶಿಕ್ಷಣ ಮೇಳ; ಸಚಿವ ಎಂ.ಬಿ.‌ ಪಾಟೀಲರಿಂದ ಉದ್ಘಾಟನೆ
“ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು, ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ? ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ, ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?” ಎಂದು ಟ್ವೀಟ್ ಮುಖೇನ ಟೀಕಿಸಿದ್ದಾರೆ.
ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ@siddaramaiahನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ.1/8#ಶಿಷ್ಟಾಚಾರಗೆಟ್ಟ_ಮುಖ್ಯಮಂತ್ರಿ*"ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)January 29, 2024

69ನೇ ಫಿಲ್ಮ್‌ಫೇರ್ ಪ್ರಶಸ್ತಿ 2024: ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 4 =
Remember me
