ಬೆಂಗಳೂರು:ಬಡವರಿಗೆ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಸವಿರುವ ಆರ್ಥಿಕ ದುರ್ಬಲರಿಗೆ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗಲೇ ಅಗ್ಗದ ದರದಲ್ಲಿ ಅಕ್ಕಿ ನೀಡಿದ್ದರು. ಅವರ ಸಂಪುಟದಲ್ಲಿ ಸಚಿವರಾಗಿದ್ದ ಇಂದಿನ ಮುಖ್ಯಮಂತ್ರಿಗಳಿಗೆ ಈ ವಿಷಯ ಮರೆತು ಹೋಗಿದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ಧಾರೆ.
ಅನ್ನಭಾಗ್ಯ ಯೋಜನೆ ಜಾರಿ ಕುರಿತು ಮಾತನಾಡಿದ ಎಚ್​ಡಿಕೆ ಇವರು ಇವತ್ತು ಅಕ್ಕಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ಆದರೆ, ದೇವೇಗೌಡರು ಹಿಂದೆಯೇ ಕಡಿಮೆ ದರದಲ್ಲಿ ಅಕ್ಕಿ ನೀಡುವ ಮೂಲಕ ಬಡಜನರ ನೆರವಿಗೆ ಧಾವಿಸಿದ್ದರು ಎಂದು ಹೇಳಿದ್ಧಾರೆ.
1995ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಜೆಟ್ ಮಂಡಿಸುತ್ತಾರೆ. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಕೆಜಿಗೆ 4.54 ರೂ. ಇದ್ದ ಅಕ್ಕಿ ದರವನ್ನ ಕೇಂದ್ರ ಸರ್ಕಾರ ಏಕಾಏಕಿ 7.49 ರೂ.ಗಳಿಗೆ ಹೆಚ್ಚಳ ಮಾಡಿತು. ಆಗ ಮುಖ್ಯಮಂತ್ರಿ ಆಗಿದ್ದ ದೇವೇಗೌಡರು ಧೈರ್ಯ ಮಾಡಿ 30 ರೂಪಾಯಿಗೆ ಕೆಜಿ ಅಕ್ಕಿ ಕೊಡುವಂತೆ ಆದೇಶ ಹೊರಡಿಸಿದರು. ಬಹುಶಃ ಅವರಿಂದಲೇ ರಾಜಕೀಯವಾಗಿ ಬೆಳೆದವರಿಗೆ ಇದು ನೆನಪಿರಲಿಕ್ಕಿಲ್ಲ. ಈಗ ಆಪರೇಶನ್ ಹಸ್ತ ಮಾಡುತ್ತೇವೆ ಎಂದು ಮೀಸೆ ತಿರುವುತ್ತಿದ್ದಾರೆ. ಜನತಾದಳ ಪಕ್ಷವನ್ನು ಮುಗಿಸೋದು ಅಷ್ಟು ಸುಲಭ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.
ಮತಕ್ಕಾಗಿ, ಅಧಿಕಾರಕ್ಕಾಗಿ ಅಕ್ಕಿ ಫ್ರೀ ಎಂದವರು ದೇವೇಗೌಡರ ಬದ್ಧತೆಯನ್ನು ಒಮ್ಮೆ ನೆನಪು ಮಾಡಿಕೊಳ್ಳಬೇಕು. ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಇವರು ಕೊಟ್ಟ ಭರವಸೆ ಈಡೇರಿಸಲಾಗದೆ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿಕಾರಿದ್ಧಾರೆ.
ಇದನ್ನೂ ಓದಿ:ಸುಳ್ಳು​ ಸುದ್ದಿ ಹರಡುವವರ ಮೇಲೆ ಖಾಕಿ ನಿಗಾ: ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್
ಇದು ಕೂಡ ಪರ್ಸೆಂಟೇಜ್ ಸರ್ಕಾರ. ನಿಮಾಗೆ ಅನುಮಾನ ಇದೆಯಾ, ಎಲ್ಲ ಇಲಾಖೆಗಳಲ್ಲಿ ಸಲಹೆಗಾರರು ಬಂದು ತುಂಬಿಕೊಂಡಿದ್ದಾರೆ. ಇದೆಲ್ಲಾ ಪರ್ಸೆಂಟೆಜ್ ವ್ಯವಸ್ಥೆಗೆ ಮಾಡಿಕೊಂಡಿರುವ ವ್ಯವಸ್ಥೆ ಎಂದು ಆರೋಪಿಸಿದ್ಧಾರೆ.
ನಮ್ಮದು ಸಂಪತ್ಪಭರಿದ ರಾಜ್ಯ. ಹಣಕ್ಕೆ ಕೊರತೆ ಇಲ್ಲ. ನಿರೀಕ್ಷೆಗೂ ಮೀರಿದ ತೆರಿಗೆ ಸಂಗ್ರಹ ಆಗುತ್ತಿದೆ. ಘೋಷಣೆ ಮಾಡಿಕೊಂಡು ಒದ್ದಾಡ್ತಾ ಇದ್ದಾರೆ. ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ ಇವರು ಈಗ ಪರ್ಸೆಂಟೇಜ್ ಬಗ್ಗೆ ತಲೆಕೆಡಿಸಿಕೊಂಡು ಕೂತಿದ್ದಾರೆ. ಇದು ಕೂಡ ಪರ್ಸೆಂಟೇಜ್ ಸರಕಾರವೇ ಆಗಿದೆ ಎಂದು ದೂರಿದ್ದಾರೆ.
ಅಕ್ಕಿ ತರಲು ರೇಟ್ ಜಾಸ್ತಿ ಮಾಡೋದು ಇವರೇ. ಕಮೀಷನ್​ಗಾಗಿ ರೇಟ್ ಜಾಸ್ತಿ ಮಾಡ್ತಾರೆ. ಕಮಿಷನ್ ಕಡಿಮೆ ಮಾಡಿದರೆ ಅಕ್ಕಿ ದರ ಕಡಿಮೆ ಆಗುತ್ತದೆ. ಇವರ ಯೋಜನೆಗೆ ಕೇಂದ್ರದ ಮುಂದೆ ಕೈಚಾಚೋದು ಏಕೆ? ನಾನು ಸಾಲಮನ್ನಾ ಘೋಷಣೆ ಮಾಡಿದಾಗ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಹೇಳಿದ್ದಾರೆ.
ಸರಕಾರ ಬಂದು ಒಂದು ತಿಂಗಳ ಮೇಲಾಯಿತು. ಜನರು ಕಷ್ಟದಲ್ಲಿದ್ದಾರೆ. ಜನ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ. ವಿವಿಧ ಇಲಾಖೆಗಳ ಮಂತ್ರಿಗಳು ಇನ್ನೂ ತಮ್ಮ ಇಲಾಖೆಗಳ ಸಭೆಗಳನ್ನೇ ನಡೆಸುತ್ತಿಲ್ಲ. ಮುಖ್ಯಮಂತ್ರಿ ಹಿಂದೆ ಮುಂದೆ ಓಡಾಡಿಕೊಂಡಿದ್ದಾರೆ. ದಿನದ 24 ಗಂಟೆಯೂ ಮುಖ್ಯಮಂತ್ರಿ ಜತೆ ಇವರಿಗೇನು ಕೆಲಸ. ಸಿಎಂ ಮನೆಯಲ್ಲೂ ಇವರೇ, ಸಿಎಂ ಕಚೇರಿಯಲ್ಲೂ ಇವರೇ, ಸಿಎಂ ದಿಲ್ಲಿಗೆ ಹೋದರೆ ಅಲ್ಲೂ ಇವರೇ. ಎನ್ ನಡೀತಿದೆ ಇಲ್ಲಿ? ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಕಾಂಗ್ರೆಸ್​ ನಾಯಕರನ್ನು ಪ್ರಶ್ನಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
