ಬೆಂಗಳೂರು:ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್​ಗೆ ಸವಾಲೆಸೆದಿದ್ದಾರೆ.
ಈ ಕುರಿತು ಮಾತನಾಡಿದ ಎಚ್​ಡಿಕೆ ಯಾರೋ ಒಬ್ಬರು ತಾಖತ್ತು ಇದ್ದರೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳಿದ್ದಾರೆ. ಅದಕ್ಕೆ ಇದೇ ನನ್ನ ಉತ್ತರ. ನನ್ನ ಹತ್ತಿರ ದಾಖಲೆಗಳೂ ಇವೆ. ದಾಖಲೆ ಕೊಡುವ ದಮ್ಮು, ತಾಖತ್ತು ನನಗೆ ಇದೆ. ತನಿಖೆ ಮಾಡುವ ದಮ್ಮು, ತಾಖತ್ತು ಇವರಿಗೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ.
ಈ ಸರಕಾರ ಇನ್ನೂ ಹನಿಮೂನ್ ಪೀರಿಯಡ್​ನಲ್ಲಿದೆ ಎಂದು ಕಾಂಗ್ರೆಸ್​ನವರೇ ಹೇಳುತ್ತಿದ್ದಾರೆ. ಸರಕಾರಕ್ಕೆ ಐದು ಆರು ತಿಂಗಳಾದರೂ ಸಮಯ ಕೊಡಬೇಡವೇ ಎಂದು ಕೆಲವರು ಕೇಳುತ್ತಿದ್ದಾರೆ. ಹನಿಮೂನ್ ಪೀರಿಯಡ್​ನಲ್ಲಿದ್ದರೆ ಈಗೆಲ್ಲಾ ಮಾಡುತ್ತಾರೆಯೇ ಈಗಾದರೆ ಮುಂದಿನ ಕಥೆಯೇನು.
ನನ್ನ ಆರೋಪಕ್ಕೆ ಕಾಂಗ್ರೆಸ್ ನಾಯಕರು ದಾಖಲೆ ಕೇಳ್ತಿದ್ದಾರೆ. ಅವರ ಕನಸನ್ನು ನಾನು ಈಡೇರಿಸುತ್ತೇನೆ. ನಾನು ದಾಖಲೆ ಕೊಟ್ಟರೆ ಯಾವ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ತಿಳಿದರೆ ಸಂಬಂಧಪಟ್ಟ ಮಂತ್ರಿಯನ್ನು ವಜಾ ಮಾಡ್ತೀರಾ. ಆ ಮಂತ್ರಿಯನ್ನು ವಜಾ ಮಾಡುವ ತಾಕತ್ ಇವರಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.
ನಾನು ನನ್ನ ಬಳಿ ಇರುವ ದಾಖಲೆಯನ್ನು ಸದನದಲ್ಲಿಯೇ ಇಡುತ್ತೇನೆ. ನಾನು ದಾಖಲೆ ಕೊಟ್ಟರೆ ಈ ಸರ್ಕಾರ ಎಲ್ಲಿರುತ್ತೊ ಗೊತ್ತಿಲ್ಲ. ಸುಮ್ಮನೆ ಸ್ವಲ್ಪ ದಿನ ಈ ಸರಕಾರ ನೆಮ್ಮದಿಯಾಗಿರಲಿ ಎಂದು ಬಿಟ್ಟಿದೀನಿ. ಸರಕಾರ ತಿದ್ದಿಕೊಂಡರೆ ಒಳ್ಳೆಯದು ಎಂದು ಬಿಟ್ಟಿದೀನಿ ಅಷ್ಟೇ.ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಒಂದು ದಾಖಲೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಗ್ಯಾರಂಟಿ ಯೋಜನೆಗಳ ನೋಂದಣಿ; ನಕಲಿ ಆ್ಯಪ್, ಲಿಂಕ್​ ಬಗ್ಗೆ ಇರಲಿ ಎಚ್ಚರ: ಬೆಂಗಳೂರು ಪೊಲೀಸ್​​​
ಮಂತ್ರಿಯೊಬ್ಬರು ನಾನು ದಾಖಲೆ ಸಮೇತ ಆರೋಪ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಅದು ಯಾವ ದಾಖಲೆ ಕೊಟ್ಟಿದ್ದಾರೆ, ಯಾವ ತನಿಖೆ ನಡೆದಿದೆ ಎನ್ನುವುದರ ಬಗ್ಗೆ ಮಾಹಿತಿ ಕೊಡಲಿ. ಚುನಾವಣೆ ಸಮಯದಲ್ಲಿ ಇವರು ಭ್ರಷ್ಟಾಚಾರದ ಬಗ್ಗೆ ಪುಟಗಟ್ಟಲೆ ಜಾಹಿರಾತು ಕೊಟ್ಟರು. ಆದರೆ, ಒಂದು ದಾಖಲೆಯನ್ನಾದರೂ ಬಿಡುಗಡೆ ಮಾಡಿದದ್ದಾರಾ. ಸುಳ್ಳು ದಾಖಲೆ ಹೇಳಿ ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.
ನನ್ನ ಅವಧಿಯಲ್ಲಿ ನಡೆದ ವರ್ಗಾವಣೆಗಳ ಬಗ್ಗೆಯೂ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ನನ್ನ ಕಾಲದಲ್ಲಿ ನಡೆದ ವರ್ಗಾವಣೆಯನ್ನು ತನಿಖೆ ಮಾಡಲಿ. ಐದು ವರ್ಷ ಕಾಂಗ್ರೆಸ್ ಪಕ್ಷದ ಪೂರ್ಣ ಸರಕಾರ ಇತ್ತಲ್ಲ, ಆ ಸರಕಾರದ ಅವಧಿಯಲ್ಲಿ ನಡೆದ ವರ್ಗಾವಣೆಗಳ ಕುರಿತು ತನಿಖೆ ನಡೆಸಲಿ. ಕಾಂಗ್ರೆಸ್​ನವರು ಹಗಲು ದರೋಡೆಗೆ ಇಳಿದಿದ್ದಾರೆ. ವರ್ಗಾವಣೆ ದಂಧೆಗೆ ಹಣ ನಿಗದಿ ಮಾಡಿದ್ದಾರೆ ಅಂತ ಗೊತ್ತು. ಪ್ರತಿ ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ದಾರೆ. ಸಮಯ ಬಂದಾಗ ದಾಖಲೆ ಕೊಟ್ಟೆ ಕೊಡುತ್ತೇನೆ. ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ನಾನು ಕೊಡುವ ದಾಖಲೆ ನೋಡಿದ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳುತ್ತೀರಿ ಅಂತ ಮೊದಲು ಅವರು ಹೇಳಲಿ. ಈ ಬಗ್ಗೆ ಪ್ರಶ್ನೆ ಎತ್ತಿದವರು ಉತ್ತರ ಕೊಡಲಿ. ಕೆಲವರು ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ. ಈಗಾಗಲೇ ಡಿಕೆ ಶಿವಕುಮಾರ್ ಅವರು ಟವೆಲ್ ಹಾಕಿದ್ದಾರೆ ಎಂದು ಕಾಂಗ್ರೆಸ್​ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + eighteen =
Remember me
