ಬೆಂಗಳೂರು:ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಕ್ರಿಯಾಶೀಲರಾಗಿ ಇರಬೇಕಾದರೆ ಸದಾ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಮತ್ತು ಬಿಬಿಎಂಪಿ ಸಹಯೋಗದೊಂದಿಗೆ ಕೆಯುಡಬ್ಲ್ಯುಜೆ ಸಭಾಂಗಣದಲ್ಲಿ ಪತ್ರಕರ್ತರಿಗಾಗಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವಿನ ಸಂಪರ್ಕ ಸೇತುವೆಯಂತೆ ಕಾರ್ಯವೆಸಗುತ್ತಿರುವ ಕಾರಣ ಶಿಸ್ತಿನ ಜೀವನವನ್ನು ಪಾಲಿಸಬೇಕಾಗುತ್ತದೆ. ಹಾಗಾಗಿ ನಿರಂತರ ಆರೋಗ್ಯ ತಪಾಸಣೆಗಳೂ ಅವರಿಗೆ ಅತ್ಯಗತ್ಯ ಎಂದು ಅವರು ಹೇಳಿದರು.
ಇದನ್ನೂ ಓದಿ:ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತಲುಪಲಿದ್ಯಾ ಅಕ್ಕಿ ರಾಜಕೀಯ?; ಕಾಂಗ್ರೆಸ್​ಗೆ ಮುನಿರತ್ನ ಸವಾಲು!
ಆರೋಗ್ಯದ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ರೋಗ ಬರುವ ಮುನ್ನವೇ ಆಗಿಂದಾಗ್ಗೆ ತಪಾಸಣೆ ಮಾಡಿಸಿಕೊಂಡು ಜಾಗ್ರತೆ ವಹಿಸಿದರೆ ಉತ್ತಮ ಆರೋಗ್ಯವನ್ನು ಸುದೀರ್ಘ ಅವಧಿಗೆ ಕಾಪಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಕೆಯುಡಬ್ಲ್ಯುಜೆ ಪತ್ರಕರ್ತರ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಶಿಬಿರ ನಡೆಸಿರುವುದು ಶ್ಲಾಘನೀಯ ಎಂದರು.
ಇದನ್ನೂ ಓದಿ:ವಾಸ್ತು ಸರಿ ಇಲ್ಲವೆಂದು ಮುಚ್ಚಿದ್ದ ದ್ವಾರವನ್ನು ತೆರೆಸಿ ಸಿಎಂ ಕಚೇರಿಗೆ ಪ್ರವೇಶಿಸಿದ ಸಿದ್ದರಾಮಯ್ಯ!
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸದಸ್ಯರ ಕಾಳಜಿಯೂ ಪತ್ರಕರ್ತರ ಸಂಘಕ್ಕೆ ಮುಖ್ಯವಾಗಿರುವುದರಿಂದ ಸಂಘ ಇಂತಹ ಕಾರ್ಯಚಟುವಟಿಕೆಗಳನ್ನು ಸತತವಾಗಿ ಹಮ್ಮಿಕೊಳ್ಳುತ್ತಿದೆ ಎಂದರು.ರಾಜ್ಯ ಖಜಾಂಚಿ ಎಂ.ವಾಸುದೇವ ಹೊಳ್ಳ ಸ್ವಾಗತಿಸಿದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವಿ.ಮುನಿರಾಜು, ಬಿಬಿಎಂಪಿ ಆರೋಗ್ಯಾಧಿಕಾರಿ ಡಾ.ಶರಣಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ಸಮಿತಿ ಸದಸ್ಯರಾದ ಕೌಸಲ್ಯಾ ಪನಾಲ್ಕರ, ಕೆ.ಆರ್. ದೇವರಾಜ್ ಮತ್ತು ನರೇಂದ್ರ ಪಾರೇಕಟ್, ಶಿವರಾಜ್, ಸೋಮಶೇಖರ್ ಗಾಂಧಿ ಮುಂತಾದವರು ಹಾಜರಿದ್ದರು. ಸುಮಾರು 235 ಮಂದಿ ತಪಾಸಣೆಗೆ ಒಳಗಾದರು.
ಕತ್ತು ಸೀಳಲ್ಪಟ್ಟು ಒದ್ದಾಡುತ್ತಿದ್ದವನ ರಕ್ತ ಹೀರಿದ ಕ್ರೂರಿ!; ವಿಡಿಯೋ ವೈರಲ್ ಆಗುತ್ತಿದ್ದಂತೆ ಪರಾರಿ

‘ತಂಗಿಗೆ ಮೆಸೇಜ್ ಮಾಡ್ಬೇಡ’ ಎಂದು ಬುದ್ಧಿಮಾತು ಹೇಳಿದ ಅಣ್ಣನ ಕೊಂದೇಬಿಟ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fifteen =
Remember me
