ಬೆಂಗಳೂರು:ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ 16 ದಿನಗಳು ಕಳೆದರೂ ಬಿಡುವು ನೀಡುತ್ತಿಲ್ಲ.
ಮುಂದಿನ ದಿನಗಳಲ್ಲಿ ಇನ್ನಷ್ಟು ವರುಣನ ಆರ್ಭಟವಾಗಲಿದ್ದು, ಇದರಿಂದ ರಾಜ್ಯದಲ್ಲಿ ಪ್ರವಾಹ ಆತಂಕ ತಂದೊಡ್ಡಿದೆ. ಜತೆಗೆ, ರೈತರು ಬದುಕು ಬೀದಿಗೆ ಬೀಳುವ ಸ್ಥಿತಿ ಎದುರಾಗಿದೆ. ಜು.1ರಿಂದ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ಪ್ರಮುಖ ಜಲಾಶಯಗಳ ಹಾಗೂ ನದಿಗಳು ಉಕ್ಕಿ ಹರಿಯುತ್ತಿವೆ. ಇದೀಗ ಮತ್ತೆ ಮಳೆ ಸುರಿದರೆ ಪ್ರಕೃತಿಕ ವಿಕೋಪ ಸಂಭವಿಸುವ ಸಾಧ್ಯತೆ ಹೆಚ್ಚಿದೆ.
ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಮುಂದುವರಿಯಲಿದ್ದು, ಶನಿವಾರ ಉತ್ತರ ಕನ್ನಡದಲ್ಲಿ ಹಲವು ಭಾಗಗಳಲ್ಲಿ ಸರಾಸರಿ 15 ಸೆಂಮೀ, ಬೆಳಗಾವಿಯ ಲೋಂಡ 9 ಸೆಂಮೀ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ 8 ಸೆಂಮೀ ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಜು.17ರಿಂದ ಜು.20ರವರೆಗೆ ಭಾರಿ ಮಳೆ ಬೀಳುವ ಮೂನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಬೀದರ್, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಅಗಾಗ್ಗೆ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ವಿದೇಶದಿಂದ ಐಷಾರಾಮಿ ಕಾರು ಖರೀದಿ: ಮದ್ರಾಸ್​ ಹೈಕೋರ್ಟ್​​ನಿಂದ ನಟ ವಿಜಯ್​ಗೆ ಬಿಗ್​ ರಿಲೀಫ್​​

ಕಳಪೆ ಪ್ರದರ್ಶನದ ಬಗ್ಗೆ ಕೊನೆಗೂ ಮೌನ ಮುರಿದ ಕೊಹ್ಲಿ, ಟ್ವೀಟ್​ ಮಾಡಿ ಹೇಳಿದ್ದೇನು?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:12 + five =
Remember me
