ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಸಾಧಾರಣ ಪ್ರಮಾಣದಲ್ಲಿದ್ದು, ಈ ವಾರಾಂತ್ಯದಿಂದ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಪ್ರಸ್ತುತ ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಹೆಚ್ಚು ಮಳೆಯಾಗುತ್ತಿದೆ. ಮಲೆನಾಡು ಸೇರಿ ಒಳನಾಡು ಪ್ರದೇಶಗಳಲ್ಲಿ ಸೀಮಿತ ಸ್ಥಳಗಳಲ್ಲಿ ಹಗುರದಿಂದ ಕೂಡಿದ ವರ್ಷಧಾರೆಯಾಗಿದೆ. ಬುಧವಾರ ಹಾಗೂ ಗುರುವಾರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನಂತರ ಶುಕ್ರವಾರ ಹಾಗೂ ಶನಿವಾರ ಮತ್ತೆ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಭಾನುವಾರದಿಂದ ಮತ್ತೆ ಚುರುಕು ಪಡೆಯಲಿದೆ. ವಾರಂತ್ಯದ ಬಳಿಕ ಬಹುತೇಕ ಜಿಲ್ಲೆಗಳಲ್ಲಿ ವರ್ಷವೈಭವ ಮರುಕಳಿಸಲಿದೆ. ಇದರಿಂದಾಗಿ ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡುಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸುವ ಸಾಧ್ಯತೆ ಇದೆ.
ಪ್ರಸ್ತುತ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗುತ್ತಿದ್ದು, ಶನಿವಾರದ ಬಳಿಕ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
