ಬೆಂಗಳೂರು :ವಿಧಾನಪರಿಷತ್ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ದಿನಕ್ಕೂ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ಜಿಲ್ಲಾಧಿಕಾರಿಯ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಕೇವಲ ಮತ ಎಣಿಕೆ ಹಾಗೂ ಮತದಾನ ದಿನಕ್ಕೆ ಸೀಮಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದೆ.
ಮಧ್ಯಮಾರಾಟ ನಿಷೇಧ ಒಂದು ದಿನಕ್ಕೆ ಸೀಮಿತಗೊಳಿಸಿ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ಉಮೇಶ ಅಡಿಗ ಅವರಿದ್ದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತೀಮಾ ಹೊನ್ನಾಪುರ, ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 135(ಸಿ) ಪ್ರಕಾರ ಯಾವುದೇ ಚುನಾಚಣೆ ಘೋಷಣೆ ಆದರೂ, ಚುನಾವಣೆಗೂ ಮುನ್ನ 48 ಗಂಟೆಗಳ ಕಾಲ ಮದ್ಯಮಾರಾಟಕ್ಕೆ ನಿರ್ಬಂಧ ವಿಧಿಸಬೇಕು ಎಂದು ತಿಳಿಸಲಾಗಿದೆ. ಅದರಂತೆ ಸರ್ಕಾರ ವಿಧಾನ ಪರಿಷತ್ ಉಪಚುನಾವಣೆಗೆ ಮತದಾನದ ದಿನಕ್ಕೂ ಮುನ್ನ 48 ಗಂಟೆಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ವಿವರಿಸಿದರು. ಅಲ್ಲದೆ, ಏಕ ಸದಸ್ಯಪೀಠ ಮದ್ಯಮಾರಾಟವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿರುವ ಆದೇಶ ಕಾನೂನಿಗೆ ವಿರುದ್ದವಾಗಿದೆ ಎಂದರು
ಜತೆಗೆ, ಮದ್ಯ ಮಾರಾಟ ಮಾಡುವುದು ಮೂಲಭೂತ ಹಕ್ಕು ಅಲ್ಲ. ಆದ್ದರಿಂದ ಈ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಜಿಲ್ಲಾಧಿಕಾರಿಗಳ ಆದೇಶವನ್ನು ಎತ್ತಿಹಿಡಿದಿದೆ.ಅಲ್ಲದೆ, ಮತದಾನಕ್ಕೂ ಮುನ್ನ 48 ಗಂಟೆಗಳು ಹಾಗೂ ಮತ ಎಣಿಕೆ ದಿನದಲ್ಲಿ ಆಹಾರ ಪೂರೈಸಲು ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಪೀಠ ಇದೇ ವೇಳೆ ತಿಳಿಸಿದೆ.
ಪ್ರಕರಣದ ಹಿನ್ನೆಲೆ ಏನು ?
ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಫೆ.14ರಂದು ಸಂಜೆ 5ರಿಂದ ಮತದಾನ ನಡೆಯುವ ಫೆ.16ರ ಮಧ್ಯರಾತ್ರಿ 12ರವರೆಗೆ ಮತ್ತು ಮತ ಎಣಿಕೆ ದಿನವಾದ ಫೆ.20ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ, ಚುನಾವಣೆ ಮುಕ್ತಾಯಕ್ಕೆ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿರ್ಬಂಧಿಸಬಹುದು ಎಂಬ ಸರ್ಕಾರದ ವಾದವನ್ನು ತಿರಸ್ಕರಿಸಿತು. ಜತೆಗೆ, ಮತದಾನದ ದಿನವಾದ ಫೆ.16 ಮತ್ತು ಎಣಿಕೆ ದಿನವಾದ ಫೆ.20ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಮಾತ್ರ ನಗರದಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧಿಸಿ ವಿಧಿಸಿ ಮಧ್ಯಂತರ ಆದೇಶ ಮಾಡಿತ್ತು . ಆ ಮೂಲಕ ನಗರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರ ಆದೇಶವನ್ನು ಮಾರ್ಪಡಿಸಿತು. ಇದನ್ನು ಪ್ರಶ್ನಿಸಿ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − five =
Remember me
