ಮಂಡ್ಯ:ಯುಗಾದಿ ಹಬ್ಬದ ಮರುದಿನ ಹಲವೆಡೆ ಹೊಸತೊಡಕು ಎಂದು ಆಚರಿಸುತ್ತಾರೆ. ಆ ದಿನ ಭರ್ಜರಿ ಮಾಂಸದಡುಗೆ ಮಾಡಿ ಸವಿಯುತ್ತಾರೆ, ಇನ್ನು ಕೆಲವೆಡೆ ಮೋಜಿಗಾಗಿ ಇಸ್ಪೀಟ್​ನಂಥ ಆಟವೂ ನಡೆಯುತ್ತದೆ. ಈ ಮಧ್ಯೆ ರಾಜ್ಯದಲ್ಲಿ ಮಾಂಸಕ್ಕೆ ಸಂಬಂಧಿಸಿದಂತೆ ಹಲಾಲ್​-ಜಟ್ಕಾ ಸಂಘರ್ಷ ಉಂಟಾಗಿದ್ದು, ನಾಳೆ ಹೊಸ ತೊಡಕಿಗೆ ಯಾರಿಗೆ ಹೆಚ್ಚು ವ್ಯಾಪಾರ, ಯಾರು ಎಲ್ಲಿ ಮಾಂಸ ಖರೀದಿಸಲಿದ್ದಾರೆ ಎಂಬುದು ಕೂಡ ಕುತೂಹಲ ಕೆರಳಿಸಿದೆ.
ಈ ಮಧ್ಯೆ ಮಂಡ್ಯದಲ್ಲಿ ಗುಡ್ಡೆ ಮಾಂಸಕ್ಕೆ ಭರ್ಜರಿ ಬೇಡಿಕೆ ಉಂಟಾಗಿದೆ. ಅದಕ್ಕಾಗಿ ನಾಲ್ಕೈದು ದಿನಗಳ ಮೊದಲೇ ಬುಕಿಂಗ್ ನಡೆಯುತ್ತಿದೆ. ಸಕ್ಕರೆ ನಾಡು ಮಂಡ್ಯದ ಹಳ್ಳಿಹಳ್ಳಿಗಳಲ್ಲೂ ಗುಡ್ಡೆ ಮಾಂಸ ಮಾರಾಟಕ್ಕೆ ಸಜ್ಜಾಗಿದ್ದಾರೆ.
ಹಲಾಲ್ ಕಟ್ ಮತ್ತು ಜಟ್ಕಾ ಕಟ್ ಘರ್ಷಣೆ ನಡುವೆಯೂ ಗುಡ್ಡೆ ಮಾಂಸ ಭರ್ಜರಿ ಸದ್ದು ಮಾಡುತ್ತಿದೆ. ಈಗಾಗಲೇ ಕಟ್ ಮಾಡಿ ಗುಡ್ಡೆ ಹಾಕಲಾರಂಭಿಸಿರುವ ವ್ಯಾಪಾರಿಗಳು ಬುಕ್ ಮಾಡಿದವರಿಗೆ ಮೊದಲ ಆದ್ಯತೆ ಎನ್ನಲಾರಂಭಿಸಿದ್ದಾರೆ.

ಕತ್ತರಿಸಿದ ಕುರಿ ಅಥವಾ ಮೇಕೆಯ ಮಾಂಸ, ಮೂಳೆ, ಲಿವರ್, ಕೊಬ್ಬು ಸೇರಿ ಎಲ್ಲಾ ಭಾಗವನ್ನೂ ಸಮವಾಗಿ ಒಂದು ಕೇಜಿ ವಿಂಗಡಣೆ ಮಾಡಿಡಲಾಗುತ್ತದೆ. ಈ ರೀತಿ ವಿಂಗಡಿಸಿಟ್ಟಿದ್ದಕ್ಕೆ ಗುಡ್ಡೆ ಮಾಂಸ ಎಂದು ಕರೆಯಲಾಗುತ್ತದೆ. ಮತ್ತೊಂದೆಡೆ ಹಲಾಲ್ ಕಟ್ ವಿರುದ್ಧ ಅಭಿಯಾನ ಆರಂಭ ಆಗಿರುವುದರಿಂದ ಹಿಂದೂ ವಾಪಾರಿಗಳಲ್ಲಿ ವ್ಯಾಪಾರದ ನಿರೀಕ್ಷೆ ಹೆಚ್ಚಾಗಿದ್ದು, ಗುಡ್ಡೆ ಮಾಂಸ ಎಂದಿಗಿಂತ ಅಧಿಕ ಮಾರಾಟವಾಗುವ ನಿರೀಕ್ಷೆ ಇದೆ.
ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ನೀಡಿ..

ಮುಳುಗುತ್ತಿದ್ದ ಪತ್ನಿಯನ್ನು ರಕ್ಷಿಸಲು ಧಾವಿಸಿದ ಪತಿ; ಇಬ್ಬರೂ ನೀರುಪಾಲು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + twenty =
Remember me
