ಬೆಂಗಳೂರು:ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಮೊದಲ ಮತ್ತು ಅತಿದೊಡ್ಡ ಮಲ್ಟಿ ಮಾಡಲ್ ಲಾಜಿಸ್ಟಿಕ್ಸ್ ಪಾರ್ಕ್ ರೂಪಿಸಲು ಸಿದ್ಧವಾಗಿದೆ.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಇದರ 100% ಮಾಲೀಕತ್ವದ ಕಂಪನಿಯಾದ ರಾಷ್ಟ್ರೀಯ ಹೆದ್ದಾರಿ ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್ ಲಿಮಿಟೆಡ್, ಅಂದಾಜು ರೂ 1,770 ಕೋಟಿ ವೆಚ್ಚದಲ್ಲಿ ಬೆಂಗಳೂರಿನಲ್ಲಿ ಮಲ್ಟಿ ಮಾದರಿ ಲಾಜಿಸ್ಟಿಕ್ಸ್ ಪಾರ್ಕ್ ಅಭಿವೃದ್ಧಿಗೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬೆಂಗಳೂರಿನ ಸರ್ಕಾರಿ ಎಸ್‌ಪಿವಿ, ಎಂಎಂಎಲ್‌ಪಿ ಪ್ರೈ.ಲಿ , ರಿಯಾಯಿತಿದಾರ ಪಾತ್ ಲಾಜಿಸ್ಟಿಕ್ಸ್ ಪಾರ್ಕ್ ಪ್ರೈ. ಲಿಮಿಟೆಡ್ ಬೆಂಗಳೂರು ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುದ್ದೇಲಿಂಗನಹಳ್ಳಿಯಲ್ಲಿ 400 ಎಕರೆ ಪ್ರದೇಶದಲ್ಲಿ ಮಲ್ಟಿ ಮಾಡಲ್ ಲಾಜಿಸ್ಟಿಕ್ಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ಯೋಜನೆಯು ಪಿಎಂ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ದೇಶದಲ್ಲಿ ಇದುವರೆಗೆ ಜಾರಿಗೆ ಬಂದ ಮೊದಲ ಮತ್ತು ಅತಿದೊಡ್ಡ ಮಲ್ಟಿ ಮಾಡಲ್ ಲಾಜಿಸ್ಟಿಕ್ಸ್ ಪಾರ್ಕ್ ಆಗಿ ಸಿದ್ಧವಾಗಲಿದೆ.
ತಡೆರಹಿತ ಲಾಜಿಸ್ಟಿಕ್ಸ್ ಚಲನೆಗೆ ಅನುಕೂಲವಾಗುವಂತೆ, ಸೈಟ್ ಪೂರ್ವ ಭಾಗದಲ್ಲಿ ಮುಂಬರುವ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಕೈಗಾರಿಕಾ ಪ್ರದೇಶವಿದೆ, ಇದರ ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ 648 , ಡಬ್ಬಾಸ್‌ ಪೇಟೆಯಿಂದ ಹೊಸೂರು ಮತ್ತು ಉತ್ತರ ಭಾಗದಲ್ಲಿ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ಮತ್ತು ದಕ್ಷಿಣದಲ್ಲಿ ಬೆಂಗಳೂರು – ಹುಬ್ಬಳ್ಳಿ – ಮುಂಬೈ ರೈಲು ಮಾರ್ಗವನ್ನು ಹೊಂದಿದೆ.
ಬೆಂಗಳೂರು ಮಲ್ಟಿ ಮಾಡಲ್ ಲಾಜಿಸ್ಟಿಕ್ಸ್ ಪಾರ್ಕ್ (ಎಂಎಂಎಲ್‌ಪಿ) ಬೆಂಗಳೂರು ವಿಮಾನ ನಿಲ್ದಾಣದಿಂದ 58 ಕಿಮೀ ಮತ್ತು ಬೆಂಗಳೂರು ನಗರ ರೈಲು ನಿಲ್ದಾಣದಿಂದ 48 ಕಿಮೀ ದೂರದಲ್ಲಿದೆ.
ಮಲ್ಟಿ ಮಾಡಲ್ ಲಾಜಿಸ್ಟಿಕ್ಸ್ ಪಾರ್ಕ್ (ಎಂಎಂಎಲ್‌ಪಿ) ಅನ್ನು ಮೂರು ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಮೊದಲ ಹಂತ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. 45 ವರ್ಷಗಳ ರಿಯಾಯಿತಿ ಅವಧಿಯ ಅಂತ್ಯದ ವೇಳೆಗೆ ಮಲ್ಟಿ ಮಾಡಲ್ ಲಾಜಿಸ್ಟಿಕ್ಸ್ ಪಾರ್ಕ್ ಸುಮಾರು 30 ಮಿಲಿಯನ್ ಮೆಟ್ರಿಕ್ ಟನ್ ಸರಕುಗಳನ್ನು ಪೂರೈಸುತ್ತದೆ ಮತ್ತು ಬೆಂಗಳೂರು ಹಾಗೂ ತುಮಕೂರಿನಂತಹ ಜಲಾನಯನ ಪ್ರದೇಶದ ಕೈಗಾರಿಕಾ ವಲಯಗಳಿಗೆ ಭಾರಿ ಉತ್ತೇಜನವನ್ನು ನೀಡಲಿದೆ.
ರಾಷ್ಟ್ರೀಯ ಹೆದ್ದಾರಿಗಳ ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ಲಿಮಿಟೆಡ್, ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ನಡುವೆ ಸರ್ಕಾರಿ ಎಸ್.ವಿ.ಪಿ ಅನ್ನು ಸಂಯೋಜಿಸಲಾಗಿದೆ.
ಮಲ್ಟಿ ಮಾಡಲ್ ಲಾಜಿಸ್ಟಿಕ್ಸ್ ಪಾರ್ಕ್ ಅಭಿವೃದ್ಧಿಯು ಒಟ್ಟಾರೆ ಸರಕು ವೆಚ್ಚಗಳು ಮತ್ತು ಸಮಯವನ್ನು ಕಡಿಮೆ ಮಾಡಲು ಸಮರ್ಥವಾದ ಅಂತರ-ಮಾದರಿ ಸರಕು ಸಾಗಣೆಯನ್ನು ಸಕ್ರಿಯಗೊಳಿಸುವ ಮೂಲಕ ದೇಶದ ಸರಕು ಸಾಗಣೆ ವಲಯವನ್ನು ಸುಧಾರಿಸಲು ಭಾರತ ಸರ್ಕಾರದ ಪ್ರಮುಖ ಉಪಕ್ರಮವಾಗಿದೆ. ಇದು ಸಮರ್ಥ ಉಗ್ರಾಣ ವ್ಯವಸ್ಥೆಯನ್ನು ಒದಗಿಸುತ್ತದೆ. ಅಲ್ಲದೆ, ಸರಕುಗಳ ಟ್ರ್ಯಾಕಿಂಗ್ ಮತ್ತು ಪತ್ತೆಹಚ್ಚುವಿಕೆಯನ್ನು ಸುಧಾರಿಸಬಹುದು ಹಾಗೂ ಇದರಿಂದಾಗಿ ಭಾರತೀಯ ಲಾಜಿಸ್ಟಿಕ್ಸ್ ವಲಯದ ದಕ್ಷತೆಯನ್ನು ಹೆಚ್ಚಿಸಬಹುದು.
‘ಇದು ನಿಮ್ಮ ಕಲ್ಪನೆಗಾಗಿ’; ‘ಯುಐ’ ಟೀಸರ್​ ನೋಡಿ ಫ್ಯಾನ್ಸ್​ ಶಾಕ್!

ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಹೆಸರು ತಳಕು: ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸ್ಪಷ್ಟನೆ ಹೀಗಿದೆ…

ವ್ಯಾಟ್ಸ್​ಆ್ಯಪ್​ ಮೂಲಕ ಪತ್ನಿಗೆ ವಿಚ್ಛೇದನ; ಪತಿಯ ವಿರುದ್ಧ ದಾಖಲಾಯ್ತು ಕೇಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + seven =
Remember me
