ಬೆಂಗಳೂರು:ಪ್ರತಿಷ್ಠಿತ ಆರ್.ವಿ. ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್​ನಲ್ಲಿ ‘ಸ್ಕೂಲ್ ಆಫ್ ಫಿಲ್ಮ್, ಮೀಡಿಯಾ, ಅಂಡ್ ಕ್ರಿಯೇಟಿವ್ ಆರ್ಟ್ಸ್ (ಸಿನಿಮಾ, ಮಾಧ್ಯಮ ಮತ್ತು ಸೃಜನಶೀಲ ಕಲೆಗಳ ಕಾಲೇಜು- ಎಸ್ಓಎಫ್ಎಂಸಿಎ) ಸ್ಥಾಪಿಸುವ ಸಂಬಂಧ ಆರ್ ವಿ ವಿಶ್ವವಿದ್ಯಾಲಯ ಹಾಗೂ ‘ಕೆಜಿಎಫ್’ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ಪರಸ್ಪರ ತಿಳಿವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿವೆ. ‌
ಇದನ್ನೂ ಓದಿ:ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಅರೆಸ್ಟ್​​
ಈ ಸಹಭಾಗಿತ್ವದಡಿ ಸ್ಥಾಪನೆಯಾಗಲಿರುವ ಕಾಲೇಜಿನಲ್ಲಿ ಸಿನಿಮಾ, ಮಾಧ್ಯಮ, ಓಟಿಟಿ, ಸೃಜನಶೀಲ ಕಲೆಗಳಿಗೆ ಸಂಬಂಧಿಸಿದ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್​ಗಳ ವ್ಯಾಸಂಗ ಇರುತ್ತದೆ. ಚಿತ್ರ ನಿರ್ಮಾಣ, ಆನಿಮೇಶನ್ ಮತ್ತು ವಿಷುಯಲ್ ಎಫೆಕ್ಟ್ಸ್, ಚಿತ್ರ ನಿರ್ದೇಶನ, ಚಿತ್ರಕಥೆ ರಚನೆ, ಸಂಕಲನ, ಸಿನಿ ಛಾಯಾಗ್ರಹಣ, ಧ್ವನಿ ಸಂರಚನೆ ಕೋರ್ಸ್​ಗಳು ಕೂಡ ಇರುತ್ತವೆ.
ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ನ ಅಧ್ಯಕ್ಷ ಡಾ. ಎಂಪಿ ಶ್ಯಾಮ್ ಅವರು ಈ ಸಹಭಾಗಿತ್ವದ ಬಗ್ಗೆ ಮಾತನಾಡಿ, ಇದರಿಂದ ನಮ್ಮ ವಿದ್ಯಾರ್ಥಿಗಳಿಗೆ ದೃಶ್ಯಮಾಧ್ಯಮಕ್ಕೆ ಸಂಬಂಧಿಸಿದಂತೆ ಜಾಗತಿಕ ಗುಣಮಟ್ಟದ ತರಬೇತಿ ಲಭ್ಯವಾಗಲಿದೆ. ಜೊತೆಗೆ, ದೇಶದ ಅತಿ ದೊಡ್ಡ ಸ್ಟುಡಿಯೋದಲ್ಲಿ ಪ್ರಾಯೋಗಿಕ ಅನುಭವವೂ ಸಿಗಲಿದೆ ಎಂದು ವಿವರಿಸಿದರು.
ಹೊಂಬಾಳೆ ಫಿಲ್ಮ್ಸ್ ಸಂಸ್ಥಾಪಕ ವಿಜಯ್ ಕಿರಗಂದೂರು ಅವರು ಈ ಸಹಭಾಗಿತ್ವದ ಬಗ್ಗೆ ಸಂತಸ ವ್ಯಕ್ತಪಡಿಸಿ, ಇದರಿಂದ ಮುಂಬರುವ ವರ್ಷಗಳಲ್ಲಿ ದೃಶ್ಯ ಮಾಧ್ಯಮ ಹಾಗೂ ದೃಶ್ಯ ಮನೋರಂಜನೆಯ ಕ್ಷೇತ್ರಕ್ಕೆ ಅಗತ್ಯವಿರುವ ವೃತ್ತಿಪರ ಪ್ರತಿಭಾವಂತರನ್ನು ರೂಪಿಸಲು ಅನುಕೂಲವಾಗಲಿದೆ ಎಂದರು. ಚಲನಚಿತ್ರ ನಿರ್ಮಾಣದಲ್ಲಿ ದೇಶದಾದ್ಯಂತ ಉತ್ತಮ ಹೆಸರುಗಳಿಸಿರುವ ಪ್ರತಿಷ್ಠಿತ ಹೊಂಬಾಳೆ ಫಿಲಂಸ್​​ ಶಿಕ್ಷಣ ಕ್ಷೇತ್ರಕ್ಕೆ ಪ್ರವೇಶಿಸುತ್ತಿದೆ.
ಇದನ್ನೂ ಓದಿ:ದುರಸ್ತಿ ನಿರೀಕ್ಷೆಯಲ್ಲಿ ಸರ್ಕಾರಿ ಶಾಲೆ, ಮೂಲಸೌಕರ್ಯ ಅವ್ಯವಸ್ಥೆ, ಬಿಡುಗಡೆಯಾಗದ ಅನುದಾನ
ಶಿಕ್ಷಣ ಕ್ಷೇತ್ರದಲ್ಲಿ ಖ್ಯಾತಿಗಳಿಸಿರುವ ಬೆಂಗಳೂರಿನ ಪ್ರತಿಷ್ಠಿತ ಆರ್.ವಿ. ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಚಲನಚಿತ್ರರಂಗ, ಮಾಧ್ಯಮ, ಕಲಾಕೌಶಲ್ಯದ ಪದವಿ ವ್ಯಾಸಂಗವನ್ನು ಪ್ರಾರಂಭಿಸುತ್ತಿದ್ದೇವೆ. ನಿಜಕ್ಕೂ ಪ್ರತಿಭಾವಂತರಿಗೆ ಇದೊಂದು ಸುವರ್ಣಾವಕಾಶ. ಎರಡು ದಿಗ್ಗಜ ಸಂಸ್ಥೆಗಳು ಒಗ್ಗೂಡಿ ಗುಣಮಟ್ಟದ ಶಿಕ್ಷಣದ ಮೂಲಕ ಪ್ರತಿಭಾವಂತರಿಗೆ ವೇದಿಕೆ ಕಲ್ಪಿಸಲು ಮುಂದಾಗುತಿದ್ದೇವೆ. ಪ್ರತಿಭೆಗಳ ಅನಾವರಣಕ್ಕೆ ಇದೊಂದು ಮೈಲಿಗಲ್ಲು ಆಗುವುದು ನಿಶ್ಚಿತ ಎಂದು ಅವರು ಅಭಿಪ್ರಾಯಿಸಿದ್ದಾರೆ.
ಆರ್.ವಿ. ಟ್ರಸ್ಟ್ ಅಧ್ಯಕ್ಷ ಶ್ಯಾಮ್ ಹಾಗೂ ಹೊಂಬಾಳೆ ಫಿಲ್ಮ್ಸ್ ನಿರ್ದೇಶಕ ಚಲುವೇಗೌಡ ಅವರು ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು.
ಡಕ್​ಔಟ್​ ಆಗಿದ್ದಕ್ಕೆ ಹಿಗ್ಗಾಮುಗ್ಗಾ ಟ್ರೋಲ್​ ಮಾಡ್ತೀರಾ! ಇವರ ಅಸಲಿ ಬ್ಯಾಟಿಂಗ್ ನೋಡಿದ್ರೆ ಕಳೆದೋಗ್ತಿರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + nineteen =
Remember me
