ಬೆಂಗಳೂರು:ಇಡೀ ದೇಶವೇ ಕರೊನಾ ಪಿಡುಗಿನ ವಿರುದ್ಧ ಹೋರಾಡುತ್ತಿದ್ದರೆ ತಮಿಳುನಾಡು ಮಾತ್ರ ಕರ್ನಾಟಕದೊಂದಿಗೆ ಗಡಿ ಜಗಳ ತೆಗೆಯಲು ಹುನ್ನಾರ ನಡೆಸಿದೆ. ಅತ್ತಿಬೆಲೆಗೆ ಹೊಂದಿಕೊಂಡಂತಿರುವ ಗಡಿಯಲ್ಲಿ ತಮಿಳುನಾಡು ಪೊಲೀಸರು ಉದ್ದೇಶಪೂರ್ವಕವಾಗಿ ನಾಕಾಬಂದಿ ಏರ್ಪಡಿಸಿ ಲಾಕ್​ಡೌನ್​ ಹಿನ್ನೆಲೆಯಲ್ಲಿ ವಾಹನಗಳ ಬಳಕೆಯನ್ನು ತಡೆಯಲು ಯತ್ನಿಸುವ ಮೂಲಕ ಗಡಿ ಕ್ಯಾತೆಗೆ ಕಿಚ್ಚುಹೊತ್ತಿಸಿದ್ದರು.
ಗುರುವಾರ ಬೆಳಗ್ಗೆ ಅತ್ತಿಬೆಲೆಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗಡಿಭಾಗದಲ್ಲಿ ಲಾಕ್​ಡೌನ್​ ಅನುಷ್ಠಾನದಲ್ಲಿ ಕರ್ನಾಟಕ ಪೊಲೀಸರು ಕೈಗೊಂಡಿರುವ ಕ್ರಮಗಳ ಪರಿಶೀಲನೆಗೆ ಮುಂದಾಗಿದ್ದರು.
ಈ ಸಂದರ್ಭದಲ್ಲಿ ತಮಿಳುನಾಡು ಪೊಲೀಸರು ರಾಜ್ಯದ ಗಡಿಯೊಳಗೆ ನಾಕಾಬಂದಿ ಏರ್ಪಡಿಸಿರುವುದನ್ನು ಗಮನಿಸಿ, ತಕ್ಷಣವೇ ಅದನ್ನು ತೆರವುಗೊಳಿಸುವಂತೆ ಮಾಡಿದರು.
ಅತ್ತಿಬೆಲೆಗೆ ಭೇಟಿ ನೀಡಿದ್ದ ಗೃಹ ಸಚಿವರನ್ನು ಅಲ್ಲಿದ್ದ ಸಿಬ್ಬಂದಿ ದೇಹದ ತಾಪಮಾನವನ್ನು ಪರಿಶೀಲಿಸಿ, ನಾಕಾಬಂದಿ ಏರ್ಪಡಿಸಿದ್ದ ಪ್ರದೇಶಕ್ಕೆ ಕರೆದೊಯ್ದಿದ್ದು ವಿಶೇಷವಾಗಿತ್ತು.
ಬಳಿಕ ಸ್ವತಃ ಸಚಿವರೇ ಗಡಿಭಾಗದಲ್ಲಿ ವಿನಾಕಾರಣ ಸಂಚರಿಸುತ್ತಿದ್ದ ವಾಹನಗಳ ತಪಾಸಣೆ ನಡೆಸಿದರು. ಅಕ್ರಮ ಪಾಸ್​ ಪಡೆದಿರುವವರು ಅಥವಾ ಪಾಸ್​ ಪಡೆದು ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆದ್ಯತೆ ಮೇರೆಗೆ ಪರಿಶೀಲನೆ ನಡೆಸಿದರು. ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್ ರಾವ್ ಮತ್ತು ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಸಚಿವರಿಗೆ ಸಹಕರಿಸಿದರು.
ನೀವಿರುವ ಪ್ರದೇಶ ಕಂಪ್ಲೀಟ್​ ಸೀಲ್​ ಆದರೆ ಹೇಗಿರುತ್ತೆ ಪರಿಸ್ಥಿತಿ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 16 =
Remember me
