ಹಾಸನ:ರಾಹುಲ್‌ಗಾಂಧಿ ಇಡಿ ವಿಚಾರಣೆ ಬಗ್ಗೆ ಕಾಂಗ್ರೆಸ್​ ಪ್ರತಿಭಟನೆ ನಡೆಸುವ ಅಗತ್ಯವಿಲ್ಲ, ದೇಶದಲ್ಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಇಡಿ ತನಿಖೆ ಹಿಂದೆ ಯಾರ ಕೈವಾಡವು ಇಲ್ಲ. ಯಾರು ತಪ್ಪು ಮಾಡಿದ್ದಾರೆ, ಯಾರೂ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಅವರನ್ನು ಇಡಿ ವಿಚಾರಣೆಗೆ ಕರಿತಾರೆ, ಕರಿಬೇಡಿ ಅಂತ ಹೇಳಕಾಗುತ್ತಾ ಎಂದು ಮಾಧ್ಯಮಗಳಿಗೆ ಮರುಪ್ರಶ್ನಿಸಿದರು.
ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೆ ಒಂದು ಕಾನೂನು, ಜನಸಾಮಾನ್ಯರಿಗೆ ಒಂದು ಕಾನೂನು ಎಂಬುದಿಲ್ಲ, ಎಲ್ಲರಿಗೂ ಒಂದೇ ಕಾನೂನು ಇದೆ. ಇಡೀ ದೇಶದಾದ್ಯಂತ ಕಾಂಗ್ರೆಸ್‌ನವರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ನಾಚಿಕೆಯಾಬೇಕು, ಕಾನೂನು, ಕಾಯ್ದೆ ಇವರು ಗೌರವಿಸದಿದ್ದರೆ, ಇನ್ಯಾರನ್ನು ಗೌರವಿಸುತ್ತಾರೆ, ಇಡಿ ವಿಚಾರಣೆಯಲ್ಲಿ ತಪ್ಪು ಮಾಡದಿದ್ದರೆ ಹೊರಗೆ ಬರ್ತಾರೆ, ಇಲ್ಲ ಶಿಕ್ಷೆ ಅನುಭವಿಸುತ್ತಾರೆ ಎಂದರು.
ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವರು, ಸಂಪೂರ್ಣ ತನಿಖೆಗೆ ಆದೇಶ ಕೊಟ್ಟಿದ್ದೇವೆ, ಯಾರು ಕೂಡ ಮಧ್ಯೆ ಪ್ರವೇಶ ಮಾಡುವುದಿಲ್ಲ.ಒಳ್ಳೆಯ ಸಿಐಡಿ ಬ್ಯಾಚ್ ಮಾಡಿ ತನಿಖೆಗೆ ಬಿಟ್ಟಿದ್ದೇವೆ. ಪೊಲೀಸ್​ ಅಧಿಕಾರಿಗಳು, ಬ್ರೋಕರ್​ಗಳು ಯಾರೇ ಆಗಲಿ ವಂಚಿಸಿರುವವರನ್ನು ಜೈಲಿಗೆ ಕಳುಹಿಸುವ ಕೆಲಸ ಆಗುತ್ತಿದೆ ಎಂದು ಹೇಳಿದರು.
ಕಿಂಗ್‌ಪಿನ್ ಟಚ್ ಮಾಡಿದ್ರೆ ಸರ್ಕಾರ ಬಿದ್ದು ಹೋಗುತ್ತೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಸವಾಲು ವಿಚಾರದ ಕುರಿತು ಮಾತನಾಡಿ ಅವರು, ಅಂತಹ ಮಾಹಿತಿಗಳಿದ್ದರೆ ಕೊಡಿ ಸರ್ಕಾರ ಹೋದರೆ ಹೋಗಲಿ ಅಂತ ನಾನೇ ಹೇಳಿದ್ದೀನಿ. ಅವರು ಇದುವರೆಗೂ ಕೂಡ ಮಾಹಿತಿ ಕೊಡಲಿಲ್ಲ, ಬರೀ ಹೇಳುತ್ತಿದ್ದಾರೆ. ನಮಗೆ ಸಿಕ್ಕ ಮಾಹಿತಿ, ಸತ್ಯ ನೋಡಿ ಯಾರನ್ನೂ ಸೇವ್ ಮಾಡಲ್ಲ, ಎಲ್ಲರನ್ನೂ ಕೂಡ ಕಷ್ಟಪಟ್ಟು ಜೈಲಿಗೆ ಸೇರಿಸುತ್ತಿದ್ದೇವೆ ಎಂದು ಹೇಳಿದರು.
ಪಿಎಸ್‌ಐ ಹಗರಣದಿಂದ ಕಷ್ಟಪಟ್ಟು ಓದಿದ ಮಕ್ಕಳಿಗೆ ತುಂಬಾ ದು:ಖ ಆಗಿದೆಇದೆಲ್ಲ ಮುಗಿದ ಮೇಲೆ ಮರುಪರೀಕ್ಷೆ ಮಾಡುತ್ತೇವೆ ಎಂದು ತಿಳಿಸಿದರು.(ದಿಗ್ವಿಜಯ ನ್ಯೂಸ್​)
ತುಮಕೂರು ಹಾಸ್ಟೆಲ್​ ವಾರ್ಡನ್​ನ ಹೈ ಡ್ರಾಮ: ಶಿಕ್ಷಕರು,ಮಕ್ಕಳ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
