ಕೊಪ್ಪಳ:ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಈ ಅಪಘಾತ ಸಂಭವಿಸಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಲಾರಿ ಹಾಗೂ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮೀಕಾ ಮೃತಪಟ್ಟವರು.
ಇದನ್ನೂ ಓದಿ:ಹೊಡೆಯುವುದಾದ್ರೆ ಹೊಡೆಯಿರಿ, ಕಡ್ಡಾಯವಾಗಿ ಬಿಲ್ ಕಟ್ಟಿಸಿಕೊಳ್ಳಿ ಅಂದಿದ್ದಾರೆ; ‘ಗ್ಯಾರಂಟಿ’ ತಂದಿಟ್ಟ ಫಜೀತಿ
ಇಂಡಿಕಾ ಕಾರು ವಿಜಯಪುರಿಂದ ಬೆಂಗಳೂರಿನ ಕಡೆಗೆ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಟಯರ್ ಸ್ಫೋಟಗೊಂಡು ರಸ್ತೆಯ ಇನ್ನೊಂದು ಬದಿಗೆ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಮೃತದೇಹಗಳನ್ನು ತೆಗೆಯಲು ಹರಸಾಹಸ ಪಡುವಂತಾಗಿದೆ. ಈ ಅಪಘಾತ ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 1 =
Remember me
