ಬೆಂಗಳೂರು :ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿ ತುಮಕೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿ ಗ್ರಾಮದ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀಮಠದ) ಪೀಠಾಧಿಪತಿ ಬಾಲ ಮಂಜುನಾಥ ಅವರಿಗೆ ಮಠದಿಂದ ಖಾಸಗಿ ಅಥವಾ ಮನೆ ಊಟ ಹಾಗೂ ಹಾಸಿಗೆ ಪೂರೈಕೆಗೆ ಹೈಕೋರ್ಟ್ ಅನುಮತಿ ನೀಡಿದೆ.
ತಮಗೆ ಮಠದಿಂದ ಖಾಸಗಿ ಅಥವಾ ಮನೆ ಊಟ ಹಾಗೂ ಹಾಸಿಗೆ ಪೂರೈಕೆಗೆ ಅನುಮತಿ ನೀಡುವಂತೆ ತುಮಕೂರು ಜೈಲು ಅಧೀಕ್ಷಕರಿಗೆ ನಿರ್ದೇಶಿಸಬೇಕು ಎಂದು ಕೋರಿ ಬಾಲ ಮಂಜುನಾಥ ಸ್ವಾಮೀಜಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರು ತಮ್ಮ ಮಠದಿಂದ ಖಾಸಗಿ ಅಥವಾ ಮನೆ ಊಟವನ್ನು ತರಿಸಿಕೊಳ್ಳಬಹುದು. ಅದನ್ನು ಜೈಲು ಅಧಿಕಾರಿಗಳು ಪರೀಕ್ಷೆ ಮಾಡಬೇಕು. ನಂತರವೇ ಅರ್ಜಿದಾರರು ಸೇವನೆಗೆ ಅವಕಾಶ ಕಲ್ಪಿಸಬೇಕು. ಇನ್ನೂ ಅರ್ಜಿದಾರರ ತಮ್ಮದೇ ಆದ ಹಾಸಿಗೆ ವ್ಯವಸ್ಥೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ತುಮಕೂರು ಕಾರಾಗೃಹ ಅಧೀಕ್ಷಕರಿಗೆ ನ್ಯಾಯಪೀಠ ಸೂಚಿಸಿದೆ.
ಜತೆಗೆ,ಅಗತ್ಯವಿದ್ದರೆ ಈ ಆದೇಶ ಮಾರ್ಪಾಡಿಗೆ ಜೈಲು ಅಧಿಕಾರಿಗಳು ನ್ಯಾಯಾಲಯವನ್ನು ಕೋರಬಹುದು ಎಂದು ಪೀಠ ಇದೇ ವೇಳೆ ಸ್ಪಷ್ಟಪಡಿಸಿದೆ.ಬಾಲ ಮಂಜುನಾಥ ಸ್ವಾಮೀಜಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತೆಯೊಬ್ಬರು 2024ರ ಮಾ.7ರಂದು ಹುಲಿಯೂರು ದುರ್ಗ ಠಾಣೆಗೆ ದೂರು ಸಲ್ಲಿಸಿದ್ದರು. ಅದರ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಸ್ವಾಮೀಜಿಯನ್ನು ಬಂಧಿಸಿದ್ದರು. ವಿಚಾರಣಾ ನ್ಯಾಯಾಲಯವು ಸ್ವಾಮೀಜಿಯನ್ನು ಮಾ.14ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಸದ್ಯ ತುಮಕೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಸ್ವಾಮೀಜಿ, ಜೈಲಿನಲ್ಲಿ ಪೂರೈಸಿಗುವ ಊಟ ತಮಗೆ ಸರಿಹೊಂದುತ್ತಿಲ್ಲ. ಇದರಿಂದ ಮಠದಿಂದ ಖಾಸಗಿ ಅಥವಾ ಮನೆ ಊಟ, ಹಾಸಿಗೆ ತರಿಸಿಕೊಳ್ಳಲು ತಮಗೆ ಅನುಮತಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರಿದ್ದರು. ಅದಕ್ಕೆ ಜೈಲಾಧಿಕಾರಿಗಳು ಸಮ್ಮಿತಿಸದಕ್ಕೆ ಸ್ವಾಮೀಜಿ ಹೈಕೋರ್ಟ್ ಮೊರೆ ಹೋಗಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + 19 =
Remember me
