ಬೆಂಗಳೂರು: ವಿವಿಧ ವಸತಿ ಯೋಜನೆಯಡಿ ಅನುಮೋದನೆ ಬಾಕಿ ಇರುವ ಮತ್ತು ಲಾನುಭವಿಗಳ ಆಯ್ಕೆ ಆಗದಿರುವ 1.36 ಲಕ್ಷ ಲಾನುಭವಿಗಳ ಆಯ್ಕೆಗೆ ಸರ್ಕಾರ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದೆ.
ವಸತಿ ಇಲಾಖೆಯಲ್ಲಿ 2021-22, 2022-23ನೇ ಸಾಲಿಗೆ ಹೆಚ್ಚುವರಿಯಾಗಿ ಮಂಜೂರು ಮಾಡಿರುವ ಮನೆಗಳ ಪೈಕಿ ಆನ್‌ಲೈನ್‌ನಲ್ಲಿ ನಿಗದಿಪಡಿಸಿರುವ ಗುರಿಗೆ ಎದುರಾಗಿ ಲಾನುಭವಿಗಳು ಆಯ್ಕೆಯಾಗಿ ವಿವಿಧ ಲಾಗಿನ್ ಹಂತದಲ್ಲಿ ಅನುಮೋದನೆ ಆಗದಿರುವ ಮತ್ತು ಇನ್ನೂ ಲಾನುಭವಿಗಳು ಆಯ್ಕೆಯಾಗದೇ ಬಾಕಿ ಇರುವ 1,35,976 ಮನೆಗಳಿಗೆ ಲಾನುಭವಿಗಳನ್ನು ಆಯ್ಕೆ ಮಾಡಿ ಡೇಟಾ ಎಂಟ್ರಿ ಮಾಡಲು ಮತ್ತು ಅನುಮೋದನೆ ಪಡೆದುಕೊಳ್ಳಲು ನ.30,2023ರ ವರೆಗೆ ಕಾಲಾವಕಾಶ ನೀಡಿ ಆದೇಶಿಸಲಾಗಿದೆ.
2021-22ನೇ ಸಾಲಿಗೆ ರಾಜ್ಯ ಪುರಷ್ಕೃತ ಯೋಜನೆಗಳಾದ ಬಸವ ವಸತಿ ಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ, ದೇವರಾಜ ಅರಸು ವಸತಿ ಯೋಜನೆಗಳಿಗೆ ಗುರಿ ನಿಗದಿಪಡಿಸಲಾಗಿತ್ತು. ಜತೆಗೆ ಹೆಚ್ಚುವರಿ ಮನೆ ಮಂಜೂರು ಕೂಡ ಮಾಡಲಾಗಿತ್ತು. ಆದರೆ 1.36 ಲಕ್ಷ ಮನೆಗಳ ಅನುಮೋದನೆ ಬಾಕಿ ಉಳಿದಿತ್ತು. ಈಗ ಈ ಯೋಜನೆಯಡಿ ಹೆಚ್ಚುವರಿ ಗುರಿಗೆ ಎದುರಾಗಿ ಲಾನುಭವಿಗಳನ್ನು ಆಯ್ಕೆ ಮಾಡಲು ಗಡುವು ವಿಸ್ತರಿಸಿ ವಸತಿ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 17 =
Remember me
