ಹುಬ್ಬಳ್ಳಿ:ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್​ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ.
ಉದ್ಯಮಿ ಭರತ್ ಜೈನ್​ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್​ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸಹೋದರ ದೂರು ನೀಡಿದ್ದರು. ಮಗ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ತಂದೆ ಭರತ ಜೈನ್ ಹೈಡ್ರಾಮ ಮಾಡಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ತಂದೆ ಮೇಲೆಯೇ ಅನುಮಾನ ಮೂಡಿತ್ತು.
ಭರತ್ ಜೈನ್​ರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಮಗನ ಹತ್ಯೆಗೆ ಸ್ಥಳೀಯ ಹಂತಕರಿಗೆ ಸುಪಾರಿ ನೀಡಿದ್ದಾಗಿ ತಂದೆ ಬಾಯ್ಬಿಟ್ಟಿದ್ದಾರೆ. ಇವರ ಹೇಳಿಕೆ ಆಧರಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹುಬ್ಬಳ್ಳಿ ತಾಲೂಕಿನ ದೇವರಗಿಡಿಹಾಳ ಗ್ರಾಮದಲ್ಲಿ ಭರತ್ ಜೈನ್​ಗೆ ಸೇರಿದ ತೋಟದ ಮನೆಯಲ್ಲಿ ಮಗನ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮಗನ ಹತ್ಯೆಗೆ ಸುಪಾರಿ ಕೊಟ್ಟಿದ್ದು ಏಕೆ ಎಂಬ ಕಾರಣ ಇನ್ನೂ ಗೊತ್ತಾಗಿಲ್ಲ. ಪ್ರಕರಣ ದಾಖಲಾದ 48 ಗಂಟೆಯೊಳಗೆ ಕೇಶ್ವಾಪುರ ಠಾಣೆ ಪೊಲೀಸ್ ಇನ್​ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.
ರಸ್ತೆ ತಿರುವಿನಲ್ಲಿ ಲಗೇಜ್​ ಆಟೋ ಪಲ್ಟಿ: ಮಂಡ್ಯ ಮೂಲದ ಮೂವರು ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಚಿಂತಾಜನಕ

ಕಲಬುರಗಿ ಕಮಿಷನರ್ ಮತ್ತು ಪತ್ನಿ ವಿರುದ್ಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ದೂರು, ಎಫ್​ಐಆರ್​ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 5 =
Remember me
