ಚಿಕ್ಕೋಡಿ:ಹೆಂಡತಿಯನ್ನು ಕೊಲೆ ಮಾಡಲು ಮಹಾರಾಷ್ಟ್ರದಲ್ಲಿ ಕಂಟ್ರಿ ಪಿಸ್ತೂಲ್​ ಖರೀದಿಸಿದ ಚಿಕ್ಕೋಡಿ ಮೂಲದ ಪತಿ ಮಹಾಶಯನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಸಚಿನ್ ಬಾಬಾಸಾಹೇಬ್ ರಾಯಮಾನೆ ಬಂಧಿತ ಆರೋಪಿ. ಈತ 15 ದಿನಗಳ ಹಿಂದಷ್ಟೆ ಪತ್ನಿ ಹರ್ಷಿತಾಗೆ ಡಿವೋರ್ಸ್ ನೀಡಿದ್ದ. ಬಳಿಕ ಆಕೆಯನ್ನು ಕೊಲ್ಲಲು ಸಂಚು ರೂಪಿಸಿದ್ದ. ಹೆಂಡತಿಗೆ ಬೇರೆಯವರ ಜತೆಗೆ ಸಂಬಂಧ ಇದೆ ಎಂದು ಅನುಮಾನಿಸಿ ಕೊಲೆಗೆ ಸ್ಕೆಚ್ ಹಾಕಿದ್ದ. ಅದಕ್ಕಾಗಿ ಸಾಂಗ್ಲಿ ಜಿಲ್ಲೆಯ ಮೀರಜ್ ತಾಲೂಕಿನ ಕುಪವಾಡ ಗ್ರಾಮದಲ್ಲಿ ಪಿಸ್ತೂಲ್ ಖರೀದಿಸಿದ್ದ.
ಇದನ್ನೂ ಓದಿ:“ನಿಮ್ಮ 2 ಸಾವಿರ ರೂ. ಬೇಡ, ಅಕ್ಕಿ-ಬೇಳೆ ಬೆಲೆ ಇಳಿಸಿ” ಎಂದು ಕಿಡಿ ಕಾರಿದ ಮಹಿಳೆ!
ಪಿಸ್ತೂಲ್ ಖರೀದಿಸಿದ ಬಳಿಕ ಮೀರಜ್​ ರೈಲು ನಿಲ್ದಾಣದಲ್ಲಿ ಆರೋಪಿ ಸಚಿನ್​ ಅನುಮಾನ ಬರುವಂತೆ ಓಡಾಡುತ್ತಿದ್ದ. ಅದನ್ನು ಗಮನಿಸಿದ ಪೊಲೀಸರು ತಕ್ಷಣ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹೆಂಡತಿಯನ್ನು ಕೊಲ್ಲಲು ರಿವಾಲ್ವರ್​ ಖರೀದಿಸಿದ್ದಾಗಿ ಬಾಯ್ಬಿಟ್ಟಿದ್ದಾನೆ. ತಕ್ಷಣವೇ ಸಚಿನ್​ನನ್ನು ಮೀರಜ್‌ನ ಗಾಂಧೀ ಚೌಕ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಚಿನ್​ ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಿವಾಸಿ. ಇತ್ತ ಚಿಕ್ಕೋಡಿ ಪೊಲೀಸರಿಗೆ ಸಚಿನ್ ಪತ್ನಿ ಹರ್ಷಿತಾಳಿಂದಲೂ ದೂರು ದಾಖಲಾಗಿದೆ. ತನಗೆ ರಕ್ಷಣೆ ನೀಡುವಂತೆ ಹಾಗೂ ತನ್ನ ಜೀವಕ್ಕೆನಾದರೂ ಆದರೆ ಪತಿ ಸಚಿನ್ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮೀರಜ್‌ನ ಗಾಂಧೀ ಚೌಕ್ ಹಾಗೂ ಚಿಕ್ಕೋಡಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ ಫೋಟೋದಲ್ಲಿರುವ ಮೊಲ ಪತ್ತೆಹಚ್ಚಿ! ಶೇ. 99 ಮಂದಿ ಕೈಯಲ್ಲಿ ಆಗಿಲ್ಲ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ನಿಮ್ಮ ಕೊಡುಗೆ ಅಪಾರ: ಬಿ.ಎಲ್​. ಸಂತೋಷ್​ ಕಾಲೆಳೆದ ಎಂ.ಬಿ. ಪಾಟೀಲ್​

ಬೆಂಗಳೂರಿನಲ್ಲಿ ನಡೆದ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಿಕ್ತು ವಿಚಿತ್ರ ತಿರುವು! ಇಬ್ಬರ ಜಗಳಕ್ಕೆ ಪೊಲೀಸರಿಗೆ ಪೀಕಲಾಟ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + nineteen =
Remember me
