ತುಮಕೂರು:ಪತ್ನಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ್ದಲ್ಲದೆ, ಹೆಂಡತಿ ನಾಪತ್ತೆ ಆಗಿದ್ದಾಳೆ ಎಂದು ನಾಟಕವಾಡಿದ್ದ ಪತಿ ಕೊನೆಗೂ ಸಿಕ್ಕಿಬಿದ್ದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಬೆಂಗಳೂರಿನ ಯಲಹಂಕ ಮೂಲದ ವಿನಯ್ ಬಂಧಿತ ಆರೋಪಿ. ಪತ್ನಿ ದರ್ಶಿನಿ (26) ಕೊಲೆಗೀಡಾದ ಮಹಿಳೆ. ವಿನಯ್​ಗೂ ನಾಗಮಂಗಲ ಮೂಲದ ದರ್ಶಿನಿ ಕಳೆದ ಆರು ವರ್ಷಗಳ ಹಿಂದೆ ಮದುವೆಯಾಗಿತ್ತು. ಇಬ್ಬರಿಗೆ ಐದು ವರ್ಷದ ಪುತ್ರನಿದ್ದಾನೆ. ಆದರೆ ಮದುವೆ ಆದಾಗಿನಿಂದಲೂ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ತಂದೆ ಮನೆಯಿಂದ ಹಣ ತರುವಂತೆ ಕಿರುಕುಳ ಕೊಡುತ್ತಿದ್ದ ವಿನಯ್, ಒಂದು ತಿಂಗಳ ಹಿಂದೆ ಬೆಂಗಳೂರು ಬಿಟ್ಟು‌, ಪತ್ನಿ ಜತೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಕಳೆದ ಶನಿವಾರ ಬಟ್ಟೆ ಒಗೆಯಲು ಪತ್ನಿ ಕೆರೆಗೆ ತೆರಳಿದ್ದಾಗ ಆಕೆಯನ್ನು ನೀರಿಗೆ ತಳ್ಳಿದ್ದ ಪತಿ, ಹೆಂಡತಿ ನಾಪತ್ತೆ ಆಗಿದ್ದಾಳೆ ಎಂದು ನಾಟಕವಾಡಿದ್ದ.
ಕೆರೆಗೆ ತಳ್ಳಿ ಕೊಲೆ ಮಾಡಿ, ತನ್ನ ಪತ್ನಿ ನಾಪತ್ತೆಯಾಗಿದ್ದಾಳೆಂದು ಡ್ರಾಮಾ ಮಾಡಿದ್ದ. ಮಾತ್ರವಲ್ಲ ತನ್ನ ಮಾವ, ಅತ್ತೆ ಹಾಗೂ ಸಂಬಂಧಿಕರಿಗೆ ಕರೆ ಮಾಡಿ ಪತ್ನಿ ನಾಪತ್ತೆ ಆಗಿದ್ದಾಳೆ ಎಂದು ಹೇಳಿದ್ದ ವಿನಯ್, ತುರುವೇಕೆರೆ ಪೊಲೀಸ್ ಠಾಣೆಗೆ ಮಾವ ಹಾಗೂ ಸಂಬಂಧಿಕರ ಜೊತೆ ದೂರು ಕೊಡಲು ಕೂಡ ತೆರಳಿದ್ದ. ಆದರೆ ತನ್ನ ಪತ್ನಿಯ ಪೋಟೋ ತರುವುದಾಗಿ ಠಾಣೆಯಿಂದ ಹೊರಬಂದವನು ಪರಾರಿಯಾಗಿದ್ದ.
ಬಳಿಕ ಕೆರೆಯಲ್ಲಿ ಮೃತದೇಹ ಕಾಣಿಸಿದ ಬಗ್ಗೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಅದು ದರ್ಶಿನಿ ಶವ ಎಂಬುದು ಖಚಿತವಾದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ನಾಪತ್ತೆಯಾಗಿದ್ದ ಆರೋಪಿ ವಿನಯ್​ನನ್ನು ತುರುವೇಕೆರೆ ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.
ಗಂಡ ಮನೆ ಬಿಟ್ಟು ಹೋಗು ಎಂದಿದ್ದಕ್ಕೆ ಪ್ರಾಣವನ್ನೇ ಬಿಟ್ಟ ಹೆಂಡ್ತಿ; ಮಗ ಪ್ರಯೋಗಕ್ಕೆ ತಂದಿದ್ದ ಕೆಮಿಕಲ್ ಕುಡಿದು ಸತ್ತ ತಾಯಿ

ಚಿಕಿತ್ಸೆಗೆಂದು ದಾಖಲಾದವಳ ಎರಡೂ ಕಿಡ್ನಿ ಕದ್ರು; ‘ನೀನಿನ್ನು ಇದ್ರೂ ಅಷ್ಟೇ, ಸತ್ರೂ ಅಷ್ಟೇ’ ಅಂತ ಪತ್ನಿ 3 ಮಕ್ಕಳ ಬಿಟ್ಟುಹೋದ ಪತಿ!

ಜ. 30ರಿಂದ ಮೂರು ವಾರ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್; ಎಲ್ಲಿ, ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
