ಹುಬ್ಬಳ್ಳಿ:ಭ್ರಷ್ಟಾಚಾರ ಎಲ್ಲಾ ಸಮಾಜ ಮತ್ತು ದೇಶಕ್ಕೆ ಅಂಟಿದ ರೋಗವಾಗಿದ್ದು, ಇದರ ನಿರ್ಮೂಲನೆ ಆಗಬೇಕೆಂದರೆ ಯಾರೂ ಜಾತಿ ಲೇಪನ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಇದನ್ನೂ ಓದಿ:ಮೂಡ ಹಗರಣ | ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: ಸಚಿವ ಎಂ‌ ಬಿ ಪಾಟೀಲ
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಭ್ರಷ್ಟಾಚಾರಕ್ಕೆ ಯಾವುದೇ ಜಾತಿ ಎಂಬುದಿಲ್ಲ. ಎಲ್ಲಾ ಸಮಾಜ ಮತ್ತು ದೇಶಕ್ಕೆ ಅಂಟಿದ ಪಿಡುಗಾಗಿದೆ. ಹಾಗಾಗಿ ಇದರ ವಿರುದ್ಧ ಹೋರಾಟಕ್ಕಿಳಿದರೆ ಯಾರೂ ಜಾತಿಯ ನೆಪವನ್ನು ಮುಂದಿಡಬಾರದು ಎಂದು ಕಾಂಗ್ರೆಸ್ಸಿಗರಿಗೆ ಕಿವಿಮಾತು ಹೇಳಿದರು.
ಮುಡಾ ಹಗರಣದಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಹಿಂದ ವರ್ಗವರು ಜಾತಿ ಲೇಪನ ಹಚ್ಚಿ ಬೀದಿಗಿಳಿದು ಹೋರಾಡುವುದು ಸರಿಯಲ್ಲ. ರಾಜ್ಯಪಾಲರು ಅತ್ಯಂತ ಹಿಂದುಳಿದ, ಎಸ್ಸಿ ಸಮಾಜಕ್ಕೆ ಸೇರಿದವರು. ಅಂಥವರ ವಿರುದ್ಧ ಬೀದಿಗಿಳಿಯುವುದು ಕಾಂಗ್ರೆಸ್ಸಿಗೆ ಶೋಭೆ ತರದು ಎಂದರು.
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ:ದೇಶದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ನೆಹರು ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಕಾಂಗ್ರೆಸ್ ಭ್ರಷ್ಟಾಚಾರವನ್ನು ಪೋಷಿಸಿಕೊಂಡು ಬಂದಿದೆ. ಹಾಗಾಗಿ ಈಗ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಪರ, ಬೆಂಬಲಕ್ಕೆ ನಿಂತಿದ್ದು, ಇದರಲ್ಲಿ ಆಶ್ಚರ್ಯ ಏನಿಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ. ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಸ್ವತಃ ನೀವೇ ಸಿಎಂ ಆಗಿರುವಾಗ ಸ್ಥಳೀಯ ಅಧಿಕಾರಿಗಳು ತನಿಖೆ ಹೇಗೆ ಮಾಡಿಯಾರು? ಎಂದು ಪ್ರಶ್ನಿಸಿದ ಜೋಶಿ, ಸಿಎಂ ಆರೋಪ ಮುಕ್ತರಾಗುವ ತನಕ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಪ್ರಲ್ಹಾದ ಜೋಶಿ ಒತ್ತಾಯಿಸಿದರು.
ನೈತಿಕ ಹೊಣೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twenty + 4 =
Remember me
