ಬೆಂಗಳೂರು:ರಾಜ್ಯದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವುದಕ್ಕೆ ಸಂಬಂಧಿಸಿದ ಸಮಸ್ಯೆಗೆ ರಾಜ್ಯ ಸರ್ಕಾರ ಕೊನೆಗೂ ಮುಕ್ತಿ ಕಾಣಿಸಿದೆ.
ಎಲ್ಲ ಅಕ್ರಮ ಕಟ್ಟಡಗಳನ್ನೂ ಸಕ್ರಮಗೊಳಿಸುವ ಮೂಲಕ ಸಂಬಂಧಿಸಿದ ಸ್ಥಳೀಯ ಆಡಳಿತಗಳಿಗೆ ಹೆಚ್ಚಿನ ಆದಾಯ ಕ್ರೋಡೀಕರಿಸಲು ಮತ್ತು ಸಾರ್ವಜನಿಕರಿಗೆ ಈ ಸಮಸ್ಯೆಯಿಂದ ಮುಕ್ತಿ ದೊರಕಿಸಲು ಸಚಿವ ಆರ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಹಲವಾರು ಅನಧಿಕೃತ ಬಡಾವಣೆಗಳು ಮತ್ತು ಕಟ್ಟಡಗಳಿಗೆ ಸರ್ಕಾರ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಒದಗಿಸಿದೆ. ಆದರೆ ಸರ್ಕಾರಕ್ಕೆ ಯಾವುದೇ ತೆರಿಗೆ ಬರುತ್ತಿಲ್ಲ. ಆದ್ದರಿಂದ ಅನಧಿಕೃತ ಕಟ್ಟಡ ನಿರ್ಮಾಣವನ್ನು ಸಕ್ರಮಗೊಳಿಸುವುದರೊಂದಿಗೆ ರಾಜ್ಯ ಸರ್ಕಾರಕ್ಕೆ ರಾಜಸ್ವ ಸಂಗ್ರಹವೂ ಮಾಡಲು ಉದ್ದೇಶಿಸಿದೆ ಎಂದು ಸಚಿವರು ಸಭೆ ಬಳಿಕ ತಿಳಿಸಿದರು.
ಬೆಂಗಳೂರು ನಗರವೊಂದರಲ್ಲಿಯೇ 2.93 ಲಕ್ಷ ಅನಧಿಕೃತ ಕಟ್ಟಡಗಳಿವೆ. ಒಂದು ಹಳೆ ಸಮೀಕ್ಷೆಯ ಪ್ರಕಾರ ರಾಜ್ಯದಾದ್ಯಂತ 35 ಲಕ್ಷ ಅನಧಿಕೃತ ಕಟ್ಟಡಗಳಿವೆ. ಈ ಸಂಖ್ಯೆ ಈಗ ಇದು ದ್ವಿಗುಣಗೊಂಡಿರಬಹುದು. ಬೆಂಗಳೂರು ಹೊರತು ಪಡಿಸಿ ಇತರೆಡೆಗಳಲ್ಲಿ ಅನಧಿಕೃತ ಕಟ್ಟಡಗಳಿಗೆ ದ್ವಿಗುಣ ತೆರಿಗೆ ವಿಧಿಸಲಾಗುತ್ತಿದೆ. ಕಾನೂನಿನಡಿ ಶೇ. 50ರವರೆಗಿನ ನಿರ್ಮಾಣ ನಿಯಮ ಉಲ್ಲಂಘನೆಗೆ ಶೇ. 6ರವರೆಗೆ ಹಾಗೂ ಅದಕ್ಕಿಂತ ಹೆಚ್ಚಿನ ಉಲ್ಲಂಘನೆಗೆ ಮಾರುಕಟ್ಟೆ ಮೌಲ್ಯದ ಶೇ. 25ರ ವರೆಗೆ ದಂಡ ವಿಧಿಸಲು ಅವಕಾಶವಿದೆ.
ಇಂದಿನ ಸಭೆಯಲ್ಲಿ ಅನಧಿಕೃತ ಆಸ್ತಿಗಳ ಸಕ್ರಮಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪುನರ್ ರಚಿಸಲು ತೀರ್ಮಾನಿಸಲಾಗಿದೆ. ಇತರ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಅಧ್ಯಯನ ನಡೆಸಲು ಸಹ ತೀರ್ಮಾನಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯು ಒಂದು ವಾರದೊಳಗೆ ಹೊಸ ಮಾರ್ಗಸೂಚಿಯನ್ನು ಸಿದ್ಧ ಪಡಿಸಲಿದೆ ಎಂದು ಹೇಳಿದರು.
ಕೋವಿಡ್​-19 ಹರಡುವಿಕೆ ತಡೆಯಲು ಪೋಲಿಯೋ ಕಣ್ಗಾವಲು ಸಿಬ್ಬಂದಿ ಬಳಕೆ

ಕರೊನಾ ಲಾಕ್​ಡೌನ್​ ಎಫೆಕ್ಟ್​: ಇಂಧನ ಮಾರಾಟದಲ್ಲಿ ಭಾರಿ ಕುಸಿತ, ಎಲ್​ಪಿಜಿ ಬಳಕೆಯಲ್ಲಿ ಏರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + thirteen =
Remember me
