ಬೆಂಗಳೂರು:ವಿದ್ಯಾವಂತರಿಂದಲೇ ಭ್ರಷ್ಟಾಚಾರ ಹೆಚ್ಚಳವಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಬೇಸರ ವ್ಯಕ್ತಪಡಿಸಿದ್ದಾರೆ. ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿದ್ಯಾ ಗ್ರೂಪ್ ಆಫ್ ಇನ್​ಸ್ಟಿಟ್ಯೂಷನ್ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಉದ್ಘಾಟಿಸಿ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಯುವಸಮೂಹ ಹೋರಾಡುವಂತಾಗಬೇಕು ಎಂದರು.
ಇದನ್ನೂ ಓದಿ:ಶಾಲೆಯ ಕಟ್ಟಡ ಕುಸಿದು 22 ವಿದ್ಯಾರ್ಥಿಗಳು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಇಂದಿನ ಸಮಾಜದಲ್ಲಿ ಶ್ರೀಮಂತಿಕೆ ಹಾಗೂ ಅಧಿಕಾರವನ್ನು ಪೂಜಿಸಲಾಗುತ್ತಿದೆ. ನೈತಿಕ ಮೌಲ್ಯಗಳಿಗೆ ಬೆಲೆ ನೀಡುವ ನೈಜ ಸಮಾಜ ನಿರ್ಮಾಣ ಪ್ರಸ್ತುತ ಕಾಲದ ಅಗತ್ಯವಾಗಿದೆ. ಭ್ರಷ್ಟಾಚಾರಿಗಳಿಗೆ ಕಾನೂನಿನ ಭಯ ಇಲ್ಲದಿರುವುದರಿಂದ ದುರಾಸೆಗೆ ಮದ್ದಿಲ್ಲ ಎಂಬಂತಾಗಿದೆ ಎಂದು ಹೇಳಿದರು.
ಶಿಕ್ಷಣ ತಜ್ಞ ಗುರುರಾಜ ಕರಜಗಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ವಿದ್ಯೆಯ ಜತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ವಣಕ್ಕೂ ಆದ್ಯತೆ ನೀಡಬೇಕು. ಶಿಕ್ಷಣ ಕ್ಷೇತ್ರ ಅಗಾಧವಾಗಿ ಬೆಳವಣಿಗೆಯಾಗುತ್ತಿದ್ದು, ರಾಷ್ಟ್ರ ನಿರ್ವಣದಲ್ಲಿ ಶಿಕ್ಷಕರ ಪಾತ್ರ ಅನನ್ಯ ಎಂದು ಹೇಳಿದರು.
ಇದನ್ನೂ ಓದಿ:ಅವನಿಲ್ಲದೆ ನನ್ನಿಂದ ಬದುಕಲು ಸಾಧ್ಯವಿಲ್ಲ… ರಾತ್ರೋ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ ನಟನ ಪ್ರೇಯಸಿ!
ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಯಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ‘ವೃಕ್ಷಮಾತೆ’ ಸಾಲುಮರದ ತಿಮ್ಮಕ್ಕ, ಡಾ.ನಾ. ಸೋಮೇಶ್ವರ, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮಂಜೇಗೌಡ, ಶಿಕ್ಷಣ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಪವನ್ ಮಂಜೇಗೌಡ ಇತರರಿದ್ದರು.
ಅವನಿಲ್ಲದೆ ನನ್ನಿಂದ ಬದುಕಲು ಸಾಧ್ಯವಿಲ್ಲ… ರಾತ್ರೋ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ ನಟನ ಪ್ರೇಯಸಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 5 =
Remember me
