ಬೆಂಗಳೂರು:ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್​ ಅಧಿಕಾರಿ, ಸಿಬ್ಬಂದಿಗೆ ವಿಶೇಷ ಭತ್ಯೆ ಮೊತ್ತವನ್ನು ಹೆಚ್ಚಳ ಮಾಡಿ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಡಿವೈಎಸ್​ಪಿ ದರ್ಜೆ ಅಧಿಕಾರಿಗೆ ಪ್ರತಿದಿನ 7 ಸಾವಿರ ರೂ., ಇನ್​ಸ್ಪೆಕ್ಟರ್​ಗೆ 700 ರೂ., ಸಬ್​ಇನ್​ಸ್ಪೆಕ್ಟರ್​ಗೆ 500 ರೂ., ಎಎಸ್​ಐ, ಹೆಡ್​ಕಾನ್​ಸ್ಟೆಬಲ್​, ಕಾನ್​ಸ್ಟೆಬಲ್​ಗೆ 500 ರೂ. ಮತ್ತು ಉಪಹಾರ ಭತ್ಯೆ 250 ರೂ.ಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಅತೀ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳಲ್ಲಿ ಬೊಮ್ಮಾಯಿಗೆ 2ನೇ ಸ್ಥಾನ; ಸಿಎಂ ಆಸ್ತಿ ವಿವರ ಹೀಗಿದೆ…
2018ರ ಚುನಾವಣೆ ವೇಳೆ ಡಿವೈಎಸ್​ಪಿಗೆ 5 ಸಾವಿರ ರೂ., ಇನ್​ಸ್ಪೆಕ್ಟರ್​ಗೆ 500 ರೂ. ಮತ್ತು ಉಳಿದವರಿಗೆ 350 ರೂ. ಮತ್ತು ಉಪಾಹಾರ ಭತ್ಯೆ 150 ರೂ. ನೀಡಲಾಗುತ್ತಿತ್ತು. ಇದನ್ನು 2023ನೇ ಸಾಲಿನ ವಿಧಾನಸಭಾ ಚುನಾವಣೆ ಕರ್ತವ್ಯಕ್ಕೆ ಹೆಚ್ಚಳ ಮಾಡಲಾಗಿದೆ.
ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿ ಸುರತವಾಗಿ ಮತ್ತು ಶಾಂತಿಯುತ ಮತದಾನ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಂಭಾವನೆಯನ್ನು ಪರಿಷ್ಕೃತ ಮಾಡಲಾಗಿದೆ. ಯಾವುದೇ ವಿಳಂಬ ಮಾಡದೆ ನಿಗದಿತ ಸಮಯದಲ್ಲಿ ಪೊಲೀಸರ ಬ್ಯಾಂಕ್​ ಖಾತೆಗೆ ಹಣ ಜಮೆ ಆಗುವಂತೆ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್​ ಇಲಾಖೆಗೆ ಸರ್ಕಾರ ಸೂಚನೆ ನೀಡಿದೆ.
ಇದನ್ನೂ ಓದಿ:ಸರ್ಕಾರಿ ನೌಕರರೇ ಹುಷಾರ್​; ಕರ್ತವ್ಯಕ್ಕೆ ಬಾರದಿದ್ರೆ ಅರೆಸ್ಟ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 17 =
Remember me
