ಬೆಂಗಳೂರು:ಸರ್ವನಾಶ ಮಾಡುವ ಗುಣಗಳನ್ನು ಮೈಗೂಡಿಸಿಕೊಂಡವರು. ಅವರ ಆಚಾರ, ವಿಚಾರ ಏನೆಂಬುದು ಎತ್ತಿ ತೋರಿಸುತ್ತದೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
ರಾಮನಗರ ಜಿಲ್ಲೆ ಹೆಸರು ಬದಲಾಯಿಸಿದರೆ ರಾಜಕೀಯವಾಗಿ ನಾಶವಾಗಲಿದ್ದಾರೆ ಎಂಬ ಹೇಳಿಕೆಗೆ ವಿಧಾನಸೌಧ ಬಳಿ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಕಾರಣಕ್ಕೆ ಹಾಸನದಿಂದ ಬೆಂಗಳೂರಿಗೆ ವಲಸೆ ಬಂದವರು. ರಾಜಕೀಯ ರಂಗದಲ್ಲಿ ಬೆಳೆದು ಮುಖ್ಯಮಂತ್ರಿ, ಪ್ರಧಾನಮಂತ್ರಿ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದರು.
ವಿಶ್ವವೇ ತಿರುಗಿ ನೋಡುವಮಟ್ಟಕ್ಕೆ ಬೆಂಗಳೂರು ಬೆಳೆದಿದೆ. ನಮ್ಮದು ಎಲ್ಲರ ಏಳಿಗೆ, ಜನಪರ ಆಡಳಿತ, ದೂರಗಾಮಿ ಅಭಿವೃದ್ಧಿ ನಿಲುವಾಗಿದೆ. ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರು ಗುರುತು ಬಿಟ್ಟುಕೊಡುವುದಿಲ್ಲ ಎಂದು ಪ್ರತಿಪಾದಿಸಿದರು.
ರಾಮನಗರ, ಕನಕಪುರ, ಚನ್ನಪಟ್ಟಣ, ಮಾಗಡಿ ಎಲ್ಲವೂ ಬೆಂಗಳೂರಿನ ಭಾಗವಾಗಿವೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದೇವೆ. ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ವಿಶ್ವದರ್ಜೆ ಬೆಂಗಳೂರು ಅಭಿವೃದ್ಧಿಗೆ ಹೊಸ ಆಯಾಮ ನೀಡಲು ಸರ್ಕಾರ ಕೈಗೊಂಡ ನಿರ್ಧಾರವನ್ನು ಜನರು ಸಂತೋಷದಿಂದ ಸ್ವಾಗತಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನಸಭೆ 2028ರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂಬ ಹೆಸರು ಕೈಬಿಟ್ಟು ರಾಮನಗರವೆಂದು ಮರು ನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿ, ಅವರ ಹಣೆಬರಹದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದನ್ನು ಬರೆದಿಲ್ಲ. ಇವತ್ತೇ ಹೇಳುತ್ತೇನೆ, ನೀವು ( ಮಾಧ್ಯಮದವರು) ಬರೆದಿಟ್ಟುಕೊಳ್ಳಿರಿ. 2028ರ ಚುನಾವಣೆಯಕ್ಕೆ ಮತ್ತೆ ಪೂರ್ಣಬಹುಮತದೊಂದಿಗೆ ಗೆದ್ದು ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.
ಕೆಆರ್ ಎಸ್ ಬೃಂದಾವನ ಉದ್ಯಾನವನ ಅಂತಾರಾಷ್ಟ್ರೀಯ ಗುಣದರ್ಜೆಯ ಉದ್ಯಾನವನ್ನಾಗಿ ಉನ್ನತೀಕರಿಸಿ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದು ಸರ್ಕಾರದ ನಿರ್ಣಯದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಿದ್ದು, ಸರ್ಕಾರ ಯಾವುದೇ ಬಂಡವಾಳ ಹೂಡುವುದಿಲ್ಲ ಎಂದು ಡಿ.ಕೆ‌.ಶಿವಕುಮಾರ್ ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 11 =
Remember me
