ಬೆಂಗಳೂರು:ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಫ್ಲೋಟಿಂಗ್ ಸೋಲಾರ್ ಅಳವಡಿಸುವ ನಿಟ್ಟಿನಲ್ಲಿ ಪೂರ್ವ ಕಾರ್ಯಸಾಧ್ಯತಾ ವರದಿ ಸಲ್ಲಿಸುವಂತೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಣ್ಣ ನೀರಾವರಿ ಕೆರೆಗಳ ವ್ಯಾಪ್ತಿಯಲ್ಲಿನ ಕೆರೆಗಳ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಕೆಯ ಮೂಲಕ ವಿದ್ಯುತ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ, ಫ್ಲೋಟಿಂಗ್  ಸೋಲಾರ್ ಅಳವಡಿಕೆಯಲ್ಲಿ ಕಾರ್ಯನಿರತರಾಗಿರುವ ಸಂಸ್ಥೆಗಳ ಜೊತೆ ಸಭೆಯನ್ನು ಆಯೋಜಿಸುವಂತೆ ಕೆಆರ್‌ಇಡಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು.
ಈ ಸೂಚನೆಯ ಹಿನ್ನಲೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ, ಫ್ಲೋಟಿಂಗ್ ಸೋಲಾರ್ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿರುವ ಬಿಹೆಚ್‌ಇಎಲ್, ಸನ್‌ಗ್ರೋ, ಆರುಷಿ ಗ್ರೀನ್ ಎನರ್ಜಿ, ಸಿಲ್ ಟ್ರೆರೆ ಸಂಸ್ಥೆಯ ಪದಾಧಿಕಾರಿಗಳಿಂದ ಯೋಜನೆಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಳ್ಳಲಾಯಿತು.
ದೇಶದ ವಿವಿಧ ಭಾಗಗಳಲ್ಲಿ ಸುಮಾರು 200 ಮೆಗಾವ್ಯಾಟ್‌ಗೂ ಹೆಚ್ಚು ವಿದ್ಯುತ್ ಫ್ಲೋಟಿಂಗ್  ಸೋಲಾರ್ ಯೋಜನೆಯ ಮೂಲಕ ಉತ್ಪಾದಿಸಲಾಗುತ್ತಿದೆ. ಇದರಿಂದ ಆಗುವ ಅನುಕೂಲಗಳು ಹಾಗೂ ವೆಚ್ಚದ ಬಗ್ಗೆ ಸಮಗ್ರ ಮಾಹಿತಿಯನ್ನು ಸಚಿವರು ಪಡೆದುಕೊಂಡರು.ಬಿಹೆಚ್‌ಇಎಲ್ ಸಂಸ್ಥೆ ಈ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು ತಾವು ಈಗಾಗಲೇ ಪೂರ್ಣಗೊಳಿಸಿರುವ ಯೋಜನೆಗಳ ಸಮಗ್ರ ಮಾಹಿತಿ ನೀಡಿದರು. ಇತರೆ ಸಂಸ್ಥೆಗಳ ಪದಾಧಿಕಾರಿಗಳು ಫ್ಲೋಟಿಂಗ್  ಸೋಲಾರ್ ಪ್ಯಾನೆಲ್ ಕ್ಷೇತ್ರದಲ್ಲಿನ ಹೊಸ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದರು.
100 ಎಕರೆಗೂ ಹೆಚ್ಚು ವ್ಯಾಪ್ತಿ ಹೊಂದಿರುವ 40 ಕೆರೆ ಗುರುತಿಸಲಾಗಿದೆ. ಇವುಗಳಲ್ಲಿ ಫ್ಲೋಟಿಂಗ್  ಸೋಲಾರ್ ಅಳವಡಿಕೆಯ ಮೂಲಕ ಸುಮಾರು 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದಾಗಿದೆ. ಇಂದು ಸಭೆಯಲ್ಲಿ ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ, ಕೆರೆಗಳಲ್ಲಿ ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಸುವ ನಿಟ್ಟಿನಲ್ಲಿ ಪೂರ್ವ ಕಾರ್ಯಸಾಧ್ಯತಾ ವರದಿ ತಯಾರು ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವರದಿಯಲ್ಲಿ ಯೋಜನೆ ಅಳವಡಿಕೆಯಿಂದ ಆಗುವ ಪ್ರಯೋಜನಗಳು, ವಿದ್ಯುತ್ ಉತ್ಪಾದನೆ, ಕೆರೆಯ ಪರಿಸರದ ಮೇಲೆ ಆಗುವ ಪರಿಣಾಮ ಹೀಗೆ ಎಲ್ಲ ಕೋನಗಳ ಮಾಹಿತಿಯನ್ನು ಪಡೆದುಕೊಳ್ಳಲು ಸೂಚನೆ ನೀಡಿದರು.
ಈ ವರದಿ ಸಲ್ಲಿಕೆಯ ನಂತರ ಮುಂದಿನ ಕ್ರಮಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬೋಸರಾಜು ತಿಳಿಸಿದರು.
ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ಕಾರ್ಯದರ್ಶಿ ರಾಘವನ್, ಕೆಆರ್‌ಇಡಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ರುದ್ರಪ್ಪಯ್ಯ, ಸಣ್ಣ ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್ ಶ್ರೀಹರಿ, ಬಿಹೆಚ್‌ಇಎಲ್ ಸಂಸ್ಥೆಯ ಸೋಲಾರ್ ವಿಭಾಗದ ಅಧಿಕಾರಿಗಳು, ಸನ್‌ಗ್ರೋ, ಆರುಷಿ ಗ್ರೀನ್ ಎನರ್ಜಿ, ಸಿಲ್ ಟ್ರೆರೆ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 5 =
Remember me
