ಯಸಳೂರು:ಕಾಡಾನೆಗಳು ನಾಡಿಗೆ ಬರಲು ಕಾರಣವೇನು ಎಂಬ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ:ಕುಮಾರಸ್ವಾಮಿ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಚನ್ನಪಟ್ಟಣದಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿಕೆಶಿ ತಿರುಗೇಟು
ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಡಿ.4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ಮೈಸೂರು ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮಾನವ-ವನ್ಯಜೀವಿ ಸಂಘರ್ಷಕ್ಕೆ ಏನು ಕಾರಣ ಎಂಬ ಅಧ್ಯಯನಕ್ಕೆ ಒತ್ತು ನೀಡಲಾಗುವುದು ಎಂದರು.
ಆನೆ ಹಾವಳಿ ತಪ್ಪಿಸಲು ಆಗಸ್ಟ್ 12ರಂದು ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಸಲಾಗುವುದು. ಈ ಸಮ್ಮೇಳನದಲ್ಲಿ ವಿಶ್ವಾದ್ಯಂತದಿಂದ ತಜ್ಞರು ಆಗಮಿಸಲಿದ್ದಾರೆ ಎಂದು ತಿಳಿಸಿದರು.  ಈ ಸಮ್ಮೇಳನದಲ್ಲಿ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶದಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ. ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿ ಕೂಡ ಅಳವಡಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದು ತಿಳಿಸಿದರು.
ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯು ಕಳೆದ ಡಿ.4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಹುತಾತ್ಮನಾಗಿ ವೀರ ಮರಣ ಹೊಂದಿದ ಹಾಸನ ಜಿಲ್ಲೆಯ ಯಳಸೂರು ಬಳಿ ಇಂದು "ಅರ್ಜುನ ಆನೆಯ ಸ್ಮಾರಕದ" ಶಂಕು ಸ್ಥಾಪನೆಯನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ…pic.twitter.com/6MLSAv7F4M
— Eshwar Khandre (@eshwar_khandre)July 6, 2024

ಮೈಸೂರು ದಸರಾ ಪ್ರಧಾನ ಆಕರ್ಷಣೆಯೇ ಜಂಬೂ ಸವಾರಿ. ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಈ ನಾಡಿನ ಹೆಮ್ಮೆ. ಅರ್ಜುನ ಆನೆ ಹಲವು ಯಶಸ್ವಿ ಆನೆ ಸೆರೆ ಕಾರ್ಯಾಚರಣೆ, ಹುಲಿ ಕಾರ್ಯಾಚರಣೆ ಮತ್ತು ಚಿರತೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದ. ಆದರೆ ಡಿ.4ರಂದು ದುರಾದೃಷ್ಟವಷಾತ್ ಕಾಡನೆಯೊಂದಿಗೆ ಕಾದಾಡಿ ಹುತಾತ್ಮನಾದ ಎಂದು ತಿಳಿಸಿದರು.
ಅರ್ಜುನನ ಸ್ಮಾರಕವನ್ನು ಡಿ.4ರ ಪ್ರಥಮ ಪುಣ್ಯ ತಿಥಿಯೊಳಗಾಗಿ ನಿರ್ಮಿಸುವಂತೆ ಸೂಚಿಸಿದ ಸಚಿವರು, ಈ ಸ್ಮಾರಕದಲ್ಲಿ ಅರ್ಜುನನ ಸಾಹಸಗಳ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.
ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ ಹೀಗಾಗಿ ಸಮಾಧಿ ಸ್ಥಳ ಯಸಳೂರಿನ ಜೊತೆಗೆ ಬಳ್ಳೆಯಲ್ಲಿ ಕೂಡ ಸ್ಮಾರಕ ನಿರ್ಮಿಸಲಾಗುವುದು ಎಂದೂ ತಿಳಿಸಿದರು.
ಇದಕ್ಕೂ ಮುನ್ನ ಅರ್ಜುನನ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ವಿಧ್ಯುಕ್ತವಾಗಿ ಭೂಮಿ ಪೂಜೆ ನೆರವೇರಿಸಿ, ಶಿಲಾನ್ಯಾಸ ಮಾಡಲಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಶಾಸಕ ಶಿವಲಿಂಗೇಗೌಡ, ಸಂಸತ್ ಸದಸ್ಯ ಶ್ರೇಯಸ್ ಪಟೇಲ್ ಮತ್ತು ಶಾಸಕ ಸಿಮೆಂಟ್ ಮಂಜು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಕಡೆ ಮತ್ತಿತರರು ಪಾಲ್ಗೊಂಡಿದ್ದರು.
ಅಯೋಧ್ಯೆಯಂತೆ ಗುಜರಾತ್‌ನಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ: ರಾಹುಲ್ ಗಾಂಧಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + 9 =
Remember me
