ಬೆಂಗಳೂರು:ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರ ಯಾಕೆ ಮೌನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.ತಮ್ಮ ಎಕ್ಸ್​ ಖಾತೆಯಲ್ಲಿ ಸರಣಿ ಟ್ಟೀಟ್​ ಮಾಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಸಿಎಎ ಜಾರಿಗೆ ತಡೆ ನೀಡಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸಾದುದ್ದೀನ್ ಓವೈಸಿ
ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ. ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ. ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ಮೋದಿ ಅವರೇ ದಯವಿಟ್ಟು ಉತ್ತರಿಸಿ ಒತ್ತಾಯಿಸಿದ್ದಾರೆ.
ಪಕ್ಕಾ ಬ್ಲಾಕ್ ಮೇಲ್ ಹಗರಣ:ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಬಿಜೆಪಿ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್ ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ಹಗರಣದಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಪ್ರಧಾನಿ ಮೋದಿ ಅವರೇ ಉತ್ತರಿಸಿ ಎಂದಿದ್ದಾರೆ.
ಪ್ರಧಾನಿ ಮೋದಿ ಅವರೇ ಉತ್ತರಿಸಿ:ಬಯಲಾಗುತ್ತಿರುವ ಮಾಹಿತಿಗಳನ್ನು ನೋಡಿದರೆ ಚುನಾವಣಾ ಬಾಂಡ್ ಹಗರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗಿಯಾಗಿರುವವರು ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷಧಿ ಉತ್ಪಾದನಾ ಕಂಪೆನಿಗಳು. ಇಂತಹ ಭ್ರಷ್ಟ, ವಂಚಕ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರ? ಇಂತಹ ಭ್ರಷ್ಟ-ವಂಚಕ ಸಂಸ್ಥೆಗಳು ತಯಾರಿಸಿದ ಔಷಧಿಗಳು ಎಷ್ಟು ಸುರಕ್ಷಿತ ಕೇಂದ್ರ ಬಿಜೆಪಿ ಇದಕ್ಕೆ ಉತ್ತರಿಸಬೇಕಾದವರು ನೀವಲ್ಲವೇ ಪ್ರಧಾನಿ ಮೋದಿ ಅವರೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಪಾತ್ರವಿದೆ ಎಂದು ಜನತೆ ನಂಬಿದ್ದಾರೆ ಎಂದು ಹೇಳಿದರು.
ಈ ಅನುಮಾನವನ್ನು ಹೋಗಲಾಡಿಸಲು ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಐಪಿಎಲ್ ಆರಂಭಕ್ಕೂ ಮುನ್ನ ದೆಹಲಿ ಕ್ಯಾಪಿಟಲ್ಸ್​ಗೆ ಅಘಾತ: ಲುಂಗಿ ಎನ್‌ಗಿಡಿ ಔಟ್, ಬದಲಿಗೆ ಅಸೀಸ್​ ಆಟಗಾರ ಎಂಟ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + twelve =
Remember me
