ಬೆಂಗಳೂರು :ಶಾಲೆ ಆರಂಭ ವಿಚಾರವನ್ನು ಕೇಂದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ಬೆನ್ನಲ್ಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಶಿಕ್ಷಕರು, ಶಿಕ್ಷಣ ತಜ್ಞರು, ಜನ ಪ್ರತಿನಿಧಿಗಳಿಂದ ಸಲಹೆ ಮತ್ತು ಸೂಚನೆ ಪಡೆಯಲು ಮುಂದಾಗಿದೆ.
ಖಾಸಗಿ ಶಿಕ್ಷಣ ಸಂಸ್ಥೆಗಳು ಶಾಲಾ ಆಡಳಿತ ಮಂಡಳಿಗಳು ಶಾಲೆ ತೆರೆಯುವುದಕ್ಕೆ ಸಿದ್ಧವಾಗಿವೆ. ಶಿಕ್ಷಣ ತಜ್ಞರಿಂದಲೂ ಸಹ ಶಾಲೆ ತೆರೆಯುವುದೇ ಸೂಕ್ತ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. ಆದರೆ, ಪಾಲಕರ ಮನಸ್ಥಿತಿ ಹೇಗಿದೆ? ಮಕ್ಕಳನ್ನು ಶಾಲೆಗೆ ಕಳುಹಿಸಲು ಸಿದ್ಧರಾಗಿದ್ದಾರೆಯೇ ಎಂಬುದನ್ನು ಖಾತ್ರಿ ಪಡೆಸಿಕೊಳ್ಳಬೇಕಿದೆ.
ಈ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆ ಪಾಲಕರ ಅಭಿಪ್ರಾಯ ಸಂಗ್ರಹಿಸಿತ್ತು. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.  ಇದೀಗ ರಾಜ್ಯದಲ್ಲಿ ಕರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ. ಆದರೆ, ಮನೆಯಲ್ಲೇ ಮಕ್ಕಳು ಕಾಲ ಕಳೆಯುತ್ತಿರುವುದರಿಂದ ಕಲಿಕೆಯಿಂದ ಮಕ್ಕಳು ದೂರಾಗುತ್ತಿದ್ದಾರೆ ಎಂಬ ದೂರು ಸಹ ಪಾಲಕರಿಂದಲೇ ಕೇಳಿ ಬರುತ್ತಿದೆ.ಇದನ್ನೂ ಓದಿ:ಬೆಂಗಳೂರಿನಿಂದ ಕಿಡ್ನ್ಯಾಪ್​ ಆಗಿದ್ದ 5 ವರ್ಷದ ಮಗು ಕನ್ಯಾಕುಮಾರಿಯಲ್ಲಿ ಪತ್ತೆ!
ಸದ್ಯ ‘ವಿದ್ಯಾಗಮ’ ಯೋಜನೆ ಅಡಿ ಶಿಕ್ಷಕರು ಬೋಧನೆ ಮಾಡುವ ಸ್ಥಳಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸುತ್ತಿರುವ ಪಾಲಕರು, ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಶಾಲೆಗಳು ಆರಂಭಿಸಿದರೆ ಕಳುಹಿಸುತ್ತಾರೆ ಎಂಬ ನಂಬಿಕೆ ಕೂಡ ಶಾಲಾ ಆಡಳಿತ ಮಂಡಳಿಯಲ್ಲಿದೆ.
ಶಾಲೆ ತೆರೆಯುವ ಮುನ್ನ ತೆಗೆದುಕೊಂಡಿರುವ ಸುರಕ್ಷತಾ ಕ್ರಮಗಳನ್ನು ಪಾಲಕರಿಗೆ ಅರ್ಥವಾಗುವ ರೀತಿಯಲ್ಲಿ ತಿಳಿಸಬೇಕು. ಅಲ್ಲದೆ, ಪ್ರತಿ ಮಗುವಿನ ಜವಾಬ್ದಾರಿಯನ್ನು ಶಾಲೆ ಮತ್ತು ಪಾಲಕರು ಸಮಾನವಾಗಿ ಸ್ವೀಕರಿಸುವುದರಿಂದ ತರಗತಿಗಳನ್ನು ಸುಸೂತ್ರವಾಗಿ ನಡೆಸಲು ಸಾಧ್ಯವಾಗಲಿದೆ. ಶಿಕ್ಷಣ ತಜ್ಞರು ಸಹ ಶಾಲೆ ತೆರೆಯುವುದೇ ಸೂಕ್ತ ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದರಿಂದ ರಾಜ್ಯ ಸರ್ಕಾರ ಸಾಧ್ಯವಾದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ.

ಕರೊನಾ ಇದ್ರೂ ಮದ್ಯ ಮಾರಾಟದಿಂದ ಬಂದ ಆದಾಯ ಎಷ್ಟು ಗೊತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − thirteen =
Remember me
