ಬೆಂಗಳೂರು:ಪಿಓಪಿ ಗಣಪತಿ ಮೂರ್ತಿಗಳನ್ನು ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣಪತಿ ಮೂರ್ತಿಗಳನ್ನು ಕೆರೆ, ಕಟ್ಟೆ, ನದಿ, ಬಾವಿಯಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತವಾಗುತ್ತದೆ. ಹೆಚ್ಚಿನ ಮಾಲಿನ್ಯವಾದಾಗ ಜಲಚರಗಳು ಸಾಯುತ್ತವೆ. ಈ ನೀರನ್ನು ಕುಡಿಯುವ ಜಾನುವಾರು ಮತ್ತು ಜನರ ಆರೋಗ್ಯದ ಮೇಲೂ ತೀವ್ರ ದುಷ್ಪರಿಣಾಮ ಆಗುತ್ತದೆ. ಹೀಗಾಗಿ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತ್ಯಜಿಸಿ, ಪರಿಸರ ಸ್ನೇಹಿ ಗಣಪತಿಯನ್ನು ಪೂಜಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರ ಜೊತೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತನಾಡಿದರು.
ಪರಿಸರ ಪ್ರಕೃತಿ ಉಳಿಸಲು, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್, ಪಿಓಪಿ ಬಳಕೆ ನಿಯಂತ್ರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಸರ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಪರಸ್ಪರ ಸಹಕಾರದಿಂದ ಕಾರ್ಯೋನ್ಮುಖವಾಗುವಂತೆ ಮತ್ತು ತ್ರೈಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಇದರ ಬಗ್ಗೆ ಕಾಲಕಾಲಕ್ಕೆ ಪ್ರಗತಿ ಪರಿಶೀಲನೆ ಮಾಡುವಂತೆಯೂ ಸಲಹೆ ನೀಡಿದರು.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶೇ.90ಕ್ಕೂ ಹೆಚ್ಚು ಜನರು ಪರಿಸರ ಸ್ನೇಹಿಯಾದ ಮಣ್ಣಿನ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ, ಪೂಜಿಸುತ್ತಿದ್ದು, ಆ ಜಿಲ್ಲೆಗಳ ಜನರಿಗೆ ಸಚಿವ ಈಶ್ವರ ಖಂಡ್ರೆ ಅಭಿನಂದನೆ ತಿಳಿಸಿದರು.
ಪರಿಸರ, ಪ್ರಕೃತಿ ಉಳಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದ್ದು, ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸಬೇಕು. ತಮ್ಮ ಮನೆಗಳಲ್ಲಿ ಪರಿಸರ ಸ್ನೇಹಿ ಗಣಪನನ್ನು ಪೂಜಿಸುವಂತೆ ಪಾಲಕರನ್ನು ಒತ್ತಾಯಿಸುವಂತೆ ಮಕ್ಕಳನ್ನು ಪ್ರೇರೇಪಿಸಬೇಕು ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕ್ರಮ ವಹಿಸಿ ಎಂದು ಸಲಹೆ ನೀಡಿದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twelve + 17 =
Remember me
