ಬೆಂಗಳೂರು:ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶೇ.90ಕ್ಕೂ ಹೆಚ್ಚು ಜನರು ಪರಿಸರ ಸ್ನೇಹಿಯಾದ ಮಣ್ಣಿನ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ, ಪೂಜಿಸುತ್ತಿದ್ದು, ಆ ಜಿಲ್ಲೆಗಳ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಇತರ ಜಿಲ್ಲೆಗಳ ಜನರೂ ಇದೇ ಪದ್ಧತಿ ಅನುಸರಿಸುವಂತೆ ಮನವಿ ಮಾಡುತ್ತೇನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರ ಜೊತೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತನಾಡಿದರು.
ಪಿಓಪಿ ಗಣಪತಿ ಮೂರ್ತಿಗಳನ್ನು ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣಪತಿ ಮೂರ್ತಿಗಳನ್ನು ಕೆರೆ, ಕಟ್ಟೆ, ನದಿ, ಬಾವಿಯಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತವಾಗುತ್ತದೆ. ಹೆಚ್ಚಿನ ಮಾಲಿನ್ಯವಾದಾಗ ಜಲಚರಗಳು ಸಾಯುತ್ತವೆ. ಈ ನೀರನ್ನು ಕುಡಿಯುವ ಜಾನುವಾರು ಮತ್ತು ಜನರ ಆರೋಗ್ಯದ ಮೇಲೂ ತೀವ್ರ ದುಷ್ಪರಿಣಾಮ ಆಗುತ್ತದೆ. ಹೀಗಾಗಿ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತ್ಯಜಿಸಿ, ಪರಿಸರ ಸ್ನೇಹಿ ಗಣಪತಿಯನ್ನು ಪೂಜಿಸುವಂತೆ ಮನವಿ ಮಾಡಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × five =
Remember me
