ದಾವಣಗೆರೆ:ಸಚಿವ ಜಗದೀಶ್​ ಶೆಟ್ಟರ್​ ಅವರ ಪುತ್ರ ಹಾಗೂ ಸೊಸೆ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ದಾವಣಗೆರೆಯ ಹಳೇ ಕುಂದುವಾಡ ಬಳಿಯ ಎನ್​ಎಚ್​-4ನಲ್ಲಿ ಮಂಗಳವಾರ ನಡೆದಿದೆ.
ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಶೆಟ್ಟರ್​ ಪುತ್ರ ಪ್ರಶಾಂತ್ ಶೆಟ್ಟರ್, ಸೊಸೆ ಅಂಚಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನಿಗೂ ಗಾಯಗಳಾಗಿವೆ.
ಇದನ್ನೂ ಓದಿ:ಊಟ ಕೊಡದಿದ್ದರೆ ಅರೆಸ್ಟ್ ಮಾಡಿಬಿಡುತ್ತೇನೆ! ಬಯಲಾಯ್ತು ಖತರ್ನಾಕ್​ ಕಳ್ಳಿಯ ಅಸಲಿಯತ್ತು
ಗಾಯಗಳುಗಳನ್ನು ಸದ್ಯ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್‌ಐ ಕಿರಣಕುಮಾರ್ ಭೇಟಿ ನೀಡಿ ಪರಿಶೀಲ‌ನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಪ್ರಾಥಮಿಕ ಚಿಕಿತ್ಸೆ ಪಡೆದು ಜಗದೀಶ್ ಶೆಟ್ಟರ್ ಪುತ್ರ ಹಾಗೂ ಸೊಸೆ ಹುಬ್ಬಳ್ಳಿಗೆ ತೆರಳಿದ್ದಾರೆಂದು ತಿಳಿದುಬಂದಿದೆ.(ದಿಗ್ವಿಜಯ ನ್ಯೂಸ್​)
ನಿಮ್ಮ ಋಣ ತೀರಿಸುತ್ತೇನೆಂದ ಸಂಸದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
