ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಎಚ್​.ವಿಶ್ವನಾಥ್​ ಸ್ಥಿತಿ ಈಗ ಏನಾಗಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಕೆ.ಕುಮಾರಸ್ವಾಮಿ ಪ್ರಶ್ನಿಸಿದರು.
ಬಿಜೆಪಿಯಲ್ಲಿ ಅನುಭವಿಸುತ್ತಿರುವ ಸ್ಥಿತಿಯಿಂದ ಅವರಿಗೆ ಈಗ ಪಶ್ಚಾತ್ತಾಪ ಆಗಿರಬಹುದು. ಈ ಹಿನ್ನೆಲೆಯಲ್ಲಿ ಅವರು ಆಪರೇಷನ್​ ಕಮಲದ ಬಗ್ಗೆ ಪುಸ್ತಕ ಬರೆಯಲು ಮುಂದಾಗಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಚ್​.ವಿಶ್ವನಾಥ್​ ಆಪರೇಷನ್​ ಕಮಲದ ಬಗ್ಗೆ ಬರೆಯುವ ಪುಸ್ತಕವನ್ನು ನಾವು ಎದುರು ನೋಡುತ್ತಿದ್ದೇವೆ. ಏನು ಬರೆಯುತ್ತಾರೋ ಬರೆಯಲಿ ಕಾದು ನೋಡೋಣ ಎಂದು ಅವರು ಹೇಳಿದರು.
ಸಂಪುಟ ವಿಸ್ತರಣೆ ಗೊಂದಲ ಹಾಗೂ ಒತ್ತಡವನ್ನು ಸಿಎಂ ಯಡಿಯೂರಪ್ಪ ಅನುಭವಿಸುತ್ತಿದ್ದಾರೆ. ಯಾವ ಕಾರಣಕ್ಕೆ ಶಾಸಕರು ರಾಜೀನಾಮೆ ಕೊಟ್ಟಿದ್ರೋ, ಅದೇ ಪರಿಸ್ಥಿತಿ ಮತ್ತೆ ಅವರಿಗೆ ಈಗ ಬಂದಿದೆ. ಕುಮಾರಸ್ವಾಮಿ ಸರಿಯಾಗಿ ಸ್ಪಂದಿಸುತ್ತಿಲ್ಲ ಅಂತಾ ರಾಜೀನಾಮೆ ಕೊಟ್ಟಿದ್ರು. ಈಗ ಸಿಎಂ ಯಡಿಯೂರಪ್ಪ ಕೂಡ ಅನ್ಯ ಪಕ್ಷಗಳಿಂದ ತೆರಳಿದವರಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − four =
Remember me
