ತುಮಕೂರು:ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿದ್ದರೂ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಸಹಮತಕ್ಕೆ ಬರಲು ಪರದಾಡಿದ್ದ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ತುಮಕೂರಿನಲ್ಲಿ ನಡೆದ ವಾಲ್ಮೀಕಿ ಸಮುದಾಯದ ಅಭಿನಂದನಾ ಕಾರ್ಯಕ್ರಮದಲ್ಲಿ ಸಿಎಂ ಗಾದಿ ವಿಚಾರ ಮತ್ತೆ ಪ್ರಸ್ತಾಪವಾಗಿದೆ. ಈ ಸಮಾರಂಭದಲ್ಲಿ ಮಾತನಾಡಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಯಾರು ಮುಖ್ಯಮಂತ್ರಿ ಆಗಬೇಕು ಎಂಬ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ನನಗೆ ಮುಖ್ಯಮಂತ್ರಿ ಆಗುವ ಅಭಿಲಾಷೆ ಇಲ್ಲ. ಆದರೆ ನಮ್ಮ ಸಮಾಜದಿಂದ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಲಿ ಎನ್ನುವುದು ನಮ್ಮ ಆಸೆ. ನಮ್ಮ ಸಮಾಜಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುವ ಮೂಲಕ ಅವರು ಮುಂದಿನ ಮುಖ್ಯಮಂತ್ರಿ ಕುರಿತ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಇದನ್ನೂ ಓದಿ:ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ..: ನಟ ಜಗ್ಗೇಶ್​ಗೆ ‘ಮೇಷ್ಟ್ರ’ ಕನ್ನಡ ಪಾಠ!
ಈ ಕಾರ್ಯಕ್ರಮಕ್ಕೆ ಕೆಲವರು ಬಂದಿಲ್ಲ. ಹಾಗಂತ ಅವರು ಸಮಾಜದ ಪರವಾಗಿಲ್ಲ ಎಂದು ಅರ್ಥವಲ್ಲ. ಅವರು ಬೇರೆ ಕಾರ್ಯಕ್ರಮಗಳಲ್ಲಿ ಇದ್ದಾರೆ. ಪೂಜ್ಯ ಸ್ವಾಮೀಜಿಯವರು ತಮ್ಮ ಆಶೀರ್ವಚನದಲ್ಲಿ ಸಮುದಾಯದ ಬೇಡಿಕೆಗಳನ್ನು ತಿಳಿಸಿದ್ದಾರೆ. ಅವುಗಳನ್ನು ಈಡೇರಿಸುವ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆ ಎಲ್ಲ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುತ್ತೇವೆ ಎನ್ನುವ ಭರವಸೆ ಇದೆ ಎಂದೂ ರಾಜಣ್ಣ ಹೇಳಿದರು.
ಇದನ್ನೂ ಓದಿ:ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತಲುಪಲಿದ್ಯಾ ಅಕ್ಕಿ ರಾಜಕೀಯ?; ಕಾಂಗ್ರೆಸ್​ಗೆ ಮುನಿರತ್ನ ಸವಾಲು!
2008ರ ವಿಧೇಯಕದಿಂದ ಹೆಚ್ಚಿನ ಶಾಸಕರು ಆಯ್ಕೆಯಾಗಲು ಸಾಧ್ಯವಾಗಿದೆ. 1998ರಲ್ಲಿ ನಾನು ಒಳ್ಳೆಯ ರೀತಿಯಲ್ಲೋ, ಕೆಟ್ಟ ರೀತಿಯಲ್ಲೋ ವಿಧಾನ ಪರಿಷತ್ ಸದಸ್ಯನಾದೆ. ನಮ್ಮ ಜಿಲ್ಲೆಯಲ್ಲಿರುವ ಅಸಹಾಯಕ ಸಮುದಾಯಗಳು ನನಗೆ ಈ ಸ್ಥಾನಮಾನ ನೀಡಿದ್ದಾರೆ. ಎಲ್ಲಾ ಜಾತಿಯವರು ನನಗೆ ಶೇ.80ರಿಂದ 90 ಮತ ನೀಡಿ ಗೆಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರು ಎಸ್​ಟಿ ಸಮುದಾಯದ ಮೂವರನ್ನು ಮಂತ್ರಿ ಆಗಿಸಿದ್ದಾರೆ. ನಮ್ಮದೇ ಕಾಂಗ್ರೆಸ್ ಮುಖ್ಯಮಂತ್ರಿಯೊಬ್ಬರು ಒಂದೇ ಒಂದು ಮಂತ್ರಿ ಸ್ಥಾನ ಕೊಟ್ಟಿರಲಿಲ್ಲ. ಸಿದ್ದರಾಮಯ್ಯ ನಮ್ಮ ಸಮಾಜಕ್ಕೆ ಕೊಟ್ಟಿರುವ ಗೌರವ ಅದು. ಮುಂದಿನ ದಿನಗಳಲ್ಲಿ ಅಹಿಂದ ಸಮುದಾಯದವರು ಎಲ್ಲ ಒಟ್ಟಾದಾಗ ಮಾತ್ರ ರಾಜಕೀಯ ಪ್ರಾತಿನಿಧ್ಯ ಸಿಗಲು ಸಾಧ್ಯ ಎಂದರು.
ನಮ್ಮ ಜಿಲ್ಲೆಯಲ್ಲಿ ಬಲಾಡ್ಯರು ಹೆಚ್ಚಿದ್ದಾರೆ. ಮೊದಲೆಲ್ಲ ನಮ್ಮ ಸಮುದಾಯದಲ್ಲಿ ಒಬ್ಬರೋ, ಇಬ್ಬರದ್ದು ಕಾರು ಇರುತ್ತಿದ್ದವು. ಈಗ ಇಲ್ಲಿ ನೋಡಿದರೆ ಜನಗಳಿಗಿಂತ ಜಾಸ್ತಿ ಕಾರುಗಳಿವೆ ಎಂದು ಹೇಳಿದರು.
ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!

ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 10 =
Remember me
