ಕಲಬುರಗಿ:ಮಹಾಮಾರಿ ಕರೊನಾ ವೈರಸ್​ ಭೀತಿಯ ನಡುವೆಯೂ ರಾಜ್ಯದೆಲ್ಲಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿರುವ ಸಮಯದಲ್ಲೇ ಕಲಬುರಗಿಯಲ್ಲಿ ನಡೆದಿರುವ ಅಮಾನವೀಯ ಘಟನೆಯೊಂದು ಕೋವಿಡ್​ಗಿಂತಲೂ ಕ್ರೂರಿ ಎಂಬುದನ್ನು ನಿರೂಪಿಸಿದೆ.
ಬಹುತೇಕರು ನಮಗೆ ಮಕ್ಕಳಾಗಿಲ್ಲವಲ್ಲ ಎಂದು ದಿನನಿತ್ಯ ಕೊರಗುತ್ತಿರುತ್ತಾರೆ. ಗಂಡಾಗಲಿ ಅಥವಾ ಹೆಣ್ಣಾಗಲಿ ನಮಗೊಂದು ಮಗು ಕರುಣಿಸಪ್ಪಾ ಎಂದು ದೇವರಲ್ಲಿ ಪ್ರಾರ್ಥಿಕೊಳ್ಳುವವರಿಗೇನು ಕಡಿಮೆಯಿಲ್ಲ. ಆದರೆ, ಇವೆಲ್ಲದರ ನಡುವೆ ಮಗು ಜನಿಸಿದರು ಅದು ಬೇಡವೆಂದು ರಸ್ತೆಯಲ್ಲಿ ಅನಾಥವಾಗಿ ಎಸೆದು ಹೋಗುವವರನ್ನು ಎಷ್ಟು ಬೈದರು ಕಡಿಮೆಯೇ.
ಇದನ್ನೂ ಓದಿ:ಮನೆಮಾಲೀಕನಿಲ್ಲದ ವೇಳೆ ಅವರ ಪತ್ನಿ ಮೇಲೆ ಅತ್ಯಾಚಾರವೆಸಗಿದ!
ಹೌದು, ಇಂಥದ್ದೇ ಘಟನೆ ಚಿಂಚೋಳಿ ತಾಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ. ಹಬ್ಬದ ಸಡಗರದಲ್ಲಿದ್ದ ಜನರಿಗೆ ನವಜಾತ ಹೆಣ್ಣು ಶಿಶುವೊಂದು ಅನಾಥವಾಗಿ ಸಿಕ್ಕಿದೆ. ಗ್ರಾಮದ ಹೊರವಲಯದಲ್ಲಿರುವ ಹಳ್ಳದ ಬಳಿ ಬ್ಯಾಗ್​ ಒಂದರಲ್ಲಿ ಯಾರೋ ಕೆಟ್ಟ ಮನಸ್ಸಿನ ವ್ಯಕ್ತಿಗಳು ಕಂದಮ್ಮನನ್ನು ಎಸೆದು ಹೋಗಿದ್ದರು.
ಇತ್ತ ಬ್ಯಾಗ್​ನಿಂದ ಅಳುವ ಶಬ್ದ ಕೇಳಿದ ರಟಕಲ್ ಗ್ರಾಮದ ನಿವಾಸಿಗಳು ಬ್ಯಾಗ್​ ತೆಗೆದುಕೊಂಡು ಬಂದು ತೆರೆದು ನೋಡಿದಾಗ ಒಮ್ಮೆ ಶಾಕ್​ ಆಗಿದ್ದಾರೆ. ತಕ್ಷಣ ಮಗುವನ್ನು ರಟಕಲ್ ಪ್ರಾರ್ಥಮಿಕ ಆರೋಗ್ಯ ಕೇಂದ್ರಕ್ಕೆ ಶಿಶುವನ್ನು ದಾಖಲಿಸಿದ್ದಾರೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಗು ಬಿಟ್ಟು ಹೋಗಿರುವವರಿಗೆ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಗೌಪ್ಯತೆಗೀಗ ಆಪತ್ತು: ರಾಜ್ಯದಲ್ಲಿ ಹೆಚ್ಚುತ್ತಿದೆ ಸ್ಮಾರ್ಟ್​ಫೋನ್​ಗಳ ದತ್ತಾಂಶ ಕಳವು
ತಲೆನೋವೆಂದು ಆಸ್ಪತ್ರೆಗೆ ಹೋದ ಉಡುಪಿ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ವಿರುದ್ಧ ತೀವ್ರ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 10 =
Remember me
