ಬೆಂಗಳೂರು:ಕಂಬಳ ಎಂದಾಕ್ಷಣ ನೆನಪಿಗೆ ಬರುವುದು ಕರಾವಳಿ. ಅದರಲ್ಲೂ ‘ಕಾಂತಾರ’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಕಂಬಳ ಮತ್ತೊಮ್ಮೆ ಜನಜನಿತವಾಯಿತು. ಕರಾವಳಿಯಲ್ಲಷ್ಟೇ ನಡೆಯುವ, ನಡೆಸಬಹುದಾದ ಅಂಥದ್ದೊಂದು ಕಂಬಳ ರಾಜಧಾನಿ ಬೆಂಗಳೂರಿನಲ್ಲೇ ನಡೆದರೆ ಹೇಗೆ? ಎಂಬ ಯೋಚನೆ ಕಳೆದ ಕೆಲವು ವರ್ಷದಿಂದ ಕರಾವಳಿಗರನೇಕರ ಮನಸ್ಸಲ್ಲಿದೆ. ಇದೀಗ ಅದಕ್ಕೂ ಕಾಲ ಕೂಡಿ ಬಂದಿದೆ.
ಹೌದು.. ಬೆಂಗಳೂರಿನಲ್ಲೇ ಕಂಬಳ ನಡೆಯಲಿದೆ. ಅದಕ್ಕಾಗಿ ಸ್ಥಳ ಪರಿಶೀಲನೆ ಕೂಡ ನಡೆದಿದೆ. ಬೆಂಗಳೂರಿನ ತುಳು ಕೂಟದ 50ನೇ ವರ್ಷದ ಸಂಭ್ರಮಾಚರಣೆ ಸಲುವಾಗಿ ಬೆಂಗಳೂರಿನಲ್ಲೇ ಕಂಬಳ ನಡೆಸಲು ನಿರ್ಧರಿಸಲಾಗಿದೆ. ಅದರಲ್ಲೂ ಬೆಂಗಳೂರಿನ ಅರಮನೆ ಮೈದಾನದಲ್ಲೇ ಈ ಕಂಬಳ ನಡೆಯಲಿದೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಪುತ್ತೂರು ಶಾಸಕ ಹಾಗೂ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕೆರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳಕ್ಕಾಗಿ ಅರಮನೆ ಮೈದಾನದಲ್ಲಿ ಸ್ಥಳ ಪರಿಶೀಲನೆ ನಡೆದಿದೆ. ಆದರೆ ಕಂಬಳ ಯಾವತ್ತು ನಡೆಯಲಿದೆ ಎನ್ನುವ ಕುರಿತು ಇನ್ನೂ ದಿನ ನಿಗದಿಯಾಗಿಲ್ಲ. ಯಾವ ಕೋಣಗಳನ್ನು ಇಲ್ಲಿನ ಕಂಬಳಕ್ಕೆ ಆಯ್ಕೆ ಮಾಡಬೇಕು, ಅವುಗಳನ್ನು ಊರಿನಿಂದ ಬೆಂಗಳೂರಿಗೆ ಹೇಗೆ ತರಬೇಕು ಎಂಬ ನಿಟ್ಟಿನಲ್ಲಿಯೂ ಚರ್ಚೆ ನಡೆಯುತ್ತಿದೆ.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ ಕೆ., ತುಳುಕೂಟದ ಗೌರವಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ಕೆ.ವಿ., ಮಾಜಿ ಅಧ್ಯಕ್ಷ ದಿನೇಶ್ ಹೆಗ್ಡೆ ಬಿ., ಜಯರಾಮ್ ಸೂಡ, ಚಂದ್ರಹಾಸ ರೈ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಸಂಪತ್ ಕುಮಾರ್, ಅಕ್ಷಯ್ ರೈ ದಂಬೆಕಾನ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಸ್ಥಳ ಪರಿಶೀಲನೆ ವೇಳೆ ಉಪಸ್ಥಿತರಿದ್ದರು.
ಮದುವೆಯಾಗುವುದಾಗಿ ಸಂಪರ್ಕ ಬೆಳೆಸಿ ವಂಚಿಸಿದ ಉದ್ಯಮಿ?: ನಟಿಯಿಂದ ಪೊಲೀಸರಿಗೆ ದೂರು

2000 ರೂ. ನೋಟು ಹಿಂಪಡೆ ವಿಚಾರ: ಆರ್​ಬಿಐನಿಂದ ಮತ್ತೆ ಮನವಿ; ಇಲ್ಲಿದೆ ವಿವರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
