ಬೆಂಗಳೂರು:ಸ್ವಂತ ಹಣದಲ್ಲಿ 16 ಕೆರೆಗಳನ್ನು ನಿರ್ಮಿಸಿ ಪ್ರಾಣಿ-ಪಕ್ಷಿಗಳಿಗೆ ಕುಡಿವ ನೀರೊದಗಿಸುತ್ತಿರುವ, ಅಂತರ್ಜಲ ವೃದ್ಧಿಗೆ ಪ್ರಮುಖ ಕೊಡುಗೆ ನೀಡಿದ, ಬೆಟ್ಟದ ತಪ್ಪಲಿನಲ್ಲಿ ಗಿಡ ನೆಟ್ಟು ಪರಿಸರ ಕಾಳಜಿ ಮೆರೆದ ಮಂಡ್ಯದ ಗಂಡು ಕಾಮೇಗೌಡ ಅವರು ರಾಜ್ಯದಲ್ಲಿ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲೂ ಚಿರಪರಿಚಿತ.
ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸಮಾಜಮುಖಿ ಕೆಲಸದಲ್ಲಿ ಮಗ್ನರಾಗಿರುವ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರನ್ನು ಜು.28ರಂದು ನಡೆದ ಮನ್​ ಕೀ ಬಾತ್​ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದರು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಶಿಷ್ಟ ರೀತಿಯಲ್ಲಿ ಕಾಮೇಗೌಡರನ್ನು ಗೌರವಿಸಿದೆ.ಇದನ್ನೂ ಓದಿರಿಸಗಣಿ-ಗಂಜಲ ಬಳಸಿದ್ರೆ ಕೋವಿಡ್​ ಬರಲ್ಲ!
‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಎಂದೇ ಹೆಸರುವಾಸಿಯಾಗಿರುವ ಕಾಮೇಗೌಡರ ಅನನ್ಯ ಪರಿಸರ ಕಾಳಜಿ ಮತ್ತು ಸಾಧನೆಯನ್ನು ಪರಿಗಣಿಸಿದರಾಜ್ಯ ಸರ್ಕಾರ, ಕಾಮೇಗೌಡರಿಗೆ ಜೀವಿತಾವಧಿಯವರೆಗೆ ‘ಉಚಿತ ಬಸ್ ಪಾಸ್‌’ ನೀಡಲು ಆದೇಶಿಸಿದೆ.
ಅದರಂತೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲ ಮಾದರಿಯ ಬಸ್​ಗಳಲ್ಲಿ ಕಾಮೇಗೌಡರು ಜೀವಿತಾವಧಿಯವರೆಗೂ ಉಚಿತವಾಗಿ ಸಂಚರಿಸಲು ಬಸ್ ಪಾಸ್​ ನೀಡಲಾಗುತ್ತಿದೆ ಎಂದು ಕೆಎಸ್ಆರ್​ಟಿ‌ಸಿ ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.
85 ವರ್ಷ ವಯಸ್ಸಿನ ಕಾಮೇಗೌಡರು ಕುಂದೂರು ಬೆಟ್ಟದ ತಪ್ಪಲಿನಲ್ಲಿ ಕೆರೆಗಳನ್ನು ನಿರ್ಮಿಸಿದ್ದು, ಇನ್ನಷ್ಟು ಸಮಾಜಮುಖಿ ಕಾರ್ಯ ಮಾಡುವಲ್ಲಿ ಅವರು ಹಂಬಲಿಸುತ್ತಿದ್ದಾರೆ. ಈ ಬಗ್ಗೆ ಅವರೇ ಇತ್ತೀಚೆಗೆ ಮಾಧ್ಯಮಗಳ ಬಳಿ ಹೇಳಿಕೊಂಡಿದ್ದನ್ನು ಸ್ಮರಿಸಬಹುದು.
ವಿಧಾನಸೌಧ ಬಳಿ ಅಪಘಾತ, ಎಎಸ್ಐ ಸೇರಿ ನಾಲ್ವರಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 12 =
Remember me
