ಬೆಂಗಳೂರು:ಕನ್ನಡ ಸಾಹಿತ್ಯ ಲೋಕದಲ್ಲಿ, ‘ಎನ್ನೆಸ್ಸೆಲ್’ ಎಂದೇ ಮನೆಮಾತಾಗಿದ್ದ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ವಿಧಿವಶರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಭಟ್ಟರು ಶನಿವಾರ (ಮಾರ್ಚ್​ 06) ಬೆಳಗ್ಗೆ 4:45ರ ಸುಮಾರಿಗೆ ಕೊನೆಯುಸಿರೆಳೆದರು. ಬನಶಂಕರಿಯ ಅವರ ನಿವಾಸದಲ್ಲಿ ಬೆಳಗ್ಗೆ 10.30ರವರೆಗೆ ಅಂತಿಮ ದರ್ಶನ ಪಡೆದುಕೊಳ್ಳಬಹುದೆಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.
ಭಟ್ಟರು 1936ರ ಅಕ್ಟೋಬರ್​ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ಇವರ ತಂದೆ ಶಿವರಾಮಭಟ್ಟ, ತಾಯಿ ಮೂಕಾಂಬಿಕೆ. ಎಂಎ ಪದವಿ ಪಡೆದ ಬಳಿಕ ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿದ ಬಳಿಕ ಕಾಲೇಜಿನಲ್ಲಿ ಪ್ರಾಧ್ಯಪಕರಾಗಿ ಸೇವೆ ಆರಂಭಿಸಿದರು.
ಎನ್ನೆಸ್ಸೆಲ್​ ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ, ಜನಪ್ರಿಯ ಪ್ರಧ್ಯಾಪಕರು. ಇವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ. ಎಲಿಯಟ್ಸ್​, ಷೇಕ್ಸ್​ಪಿಯರ್​ ಕಾವ್ಯಗಳನ್ನು ಕನ್ನಡಕ್ಕೆ ಅನುವಾದಿಸಿದರು. “ಹೊರಳು ದಾರಿಯಲ್ಲಿ ಕಾವ್ಯ” ಈ ‘ವಿಮರ್ಶಾಗ್ರಂಥ’ಕ್ಕೆ 1974ರಲ್ಲಿ ‘ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಲಭಿಸಿದೆ.
ನಾಲ್ಕುಬಾರಿ ಅಮೆರಿಕದಲ್ಲಿ ವಿಶೇಷ ಆಹ್ವಾನಿತರಾಗಿದ್ದರು. ಅವರು ಕೊಟ್ಟ ಉಪನ್ಯಾಸಗಳ ಸಂಖ್ಯೆ 80. ನ್ಯೂಯಾರ್ಕ್, ನ್ಯೂಜರ್ಸಿ, ಶಿಕಾಗೊ, ಲಾಸ್ ಎಂಜಲೀಸ್, ಸ್ಯಾನ್ ಫ್ರಾನ್ಸಿಸ್ಕೋ ಮುಂತಾದ ನಗರಗಳಲ್ಲಿ ಭಟ್ಟರು ಮನೆಮಾತಾಗಿದ್ದಾರೆ.
ಕರೊನಾಗೆ ನಲುಗಿದ ಆರ್ಥಿಕತೆ: ಕೇಂದ್ರದ ಆದಾಯಕ್ಕೆ ಬರೆ, ರಾಜ್ಯಕ್ಕೆ ಹೊರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 5 =
Remember me
