ಬೆಂಗಳೂರು:ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಹಾಗೂ ಜನ ಸಾಮಾನ್ಯರ ಜಾತ್ರೆಯಾಗಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಹಾಗೂ ಹಾವೇರಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿದೆ. ಈ ನಿಟ್ಟಿನಲ್ಲಿ ‘ಮನೆ-ಮನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತು ಎನ್ನುವ ಪರಿಕಲ್ಪನೆಯಲ್ಲಿ ಮುನ್ನಡೆಯುತ್ತಿರುವಾಗ ಈ ಕಾರ್ಯಕ್ರಮದ ಮೂಲಕ ಈಗಾಗಲೇ ನೂರಾರು ಜನರ ಮನೆಗೆ ಭೇಟಿ ನೀಡಿ ಮನೆಗೆ ಪರಿಷತ್ತಿನ ಧ್ಯೇಯ್ಯೋದ್ದೇಶ ತಿಳಿಸುವ ಕಾರ್ಯ ಮಾಡಲಾಗುತ್ತಿದೆ. ಸಮ್ಮೇಳನದ ಹಿನ್ನೆಲೆಯಲ್ಲಿ ಜ.4 ರಿಂದ 8ರವರೆಗೆ ಸಮ್ಮೇಳನ ನಡೆಯುವ ಸ್ಥಳದ ಸಮೀಪದಲ್ಲಿನ ಅಜ್ಜಯ್ಯನ ಗುಡಿಯ ಸುತ್ತಮುತ್ತಲ ಮನೆಯಲ್ಲಿ ವಾಸ್ತವ್ಯ ಮಾಡಲಾಗುವುದು ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಹಾವೇರಿ ನನ್ನ ತವರೂರು, ಅಲ್ಲಿನ ಯಾವುದೇ ಮನೆಯಲ್ಲಿ ಇದ್ದರೂ ಅದು ತನ್ನ ಮನೆಯೇ ಎಂದು ಭಾವಿಸಿದ್ದೇನೆ. ಸಾಮಾನ್ಯರಲ್ಲಿ ಸಾಮಾನ್ಯರಂತೆ ಬದುಕಲು ಇಷ್ಟ ಪಡುವುದರಿಂದ ಯಾವುದೇ ವಿಶೇಷ ಸೌಲಭ್ಯ ಬಯಸದೆ, ಹಾವೇರಿಯ ಜನರ ಮನೆಯಲ್ಲಿ ವಾಸ್ತವ್ಯ ಮಾಡಿ ಜನರ ಹತ್ತಿರವಾಗಿರಬೇಕು ಎಂಬ ಅಪೇಕ್ಷೆ ನನ್ನದು. ಹಾಗಾಗಿ ಅಜ್ಜಯ್ಯನ ದೇವಸ್ಥಾನದ ಸುತ್ತಮುತ್ತಲಿನ ಯಾವುದಾದರೂ ಮನೆಯವರು ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಲು ಇಚ್ಛಿಸುವವರು ಪರಿಷತ್ತಿಗೆ ಕರೆ ಮಾಡಿ ತಮ್ಮ ವಿಳಾಸ ತಿಳಿಸುವಂತೆ ಮನವಿ ಮಾಡಿದ್ದಾರೆ.
ವಿಳಾಸ: ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು 560018, ಮೊ: 9480628398, ದೂರವಾಣಿ ಸಂಖ್ಯೆ 080-26623584, 26612991 ಸಂಪರ್ಕಿಸಬಹುದು.
ಶ್ರಾವಣ, ಕಾರ್ತೀಕ, ಆಷಾಢ ಮಾಸ… ಅಂತ ಸ್ಕೂಲ್ ಮಕ್ಕಳಿಗೆ ಮೊಟ್ಟೆ ಕೊಡ್ತಿಲ್ಲ ಹೆಡ್ ಮೇಷ್ಟ್ರು! ಚಿನಗ ಶಾಲೆ ಶಿಕ್ಷಕರ ಆಡಿಯೋ ವೈರಲ್​

ವಿದ್ಯಾರ್ಥಿ ಹಂತಕನ ಬಂಧನ: ಶಿಕ್ಷಕಿ ಮೇಲಿನ ಅತಿರೇಕದ ಪ್ರೇಮವೇ ಕೊಲೆಗೆ ಕಾರಣ? ವಾಟ್ಸ್​ಆ್ಯಪ್​ನಲ್ಲಿದೆ ರಹಸ್ಯ…

ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
