ಬೆಂಗಳೂರು:ನಾಡಿನಲ್ಲಿ ಬರ ಪರಿಸ್ಥಿತಿ ತಲೆದೂರಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.
ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿಯ ಹಿತವನ್ನು ಕಾಪಾಡುವ ಜಾವಾಬ್ದಾರಿ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ರಾಜ್ಯದಲ್ಲಿ ಬರ ೋಷಣೆಯಾಗಿರುವ ಸಂದರ್ಭದಲ್ಲಿ ಅದ್ದೂರಿ ಸಮ್ಮೇಳನ ಆಚರಿಸುವುದು ಅರ್ಥ ಹೀನವಾಗಲಿದೆ. ಹಾಗಾಗಿ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ನಾಡಿನ ರೈತರು ಸಂಕಷ್ಟದಲ್ಲಿರುವಾಗ ಸಂಭ್ರಮಾಚರಣೆ ಮಾಡುವುದು ಸೂಕ್ತವಲ್ಲ. ರಾಜ್ಯ ಸರ್ಕಾರ ೋಷಿಸಿರುವ ಬರಗಾಲ ಪೀಡಿತ ಜಿಲ್ಲೆಗಳಲ್ಲಿ ಸಮ್ಮೇಳನ ನಡೆಯಬೇಕಿರುವ ಮಂಡ್ಯ ಜಿಲ್ಲೆಯೂ ಸೇರಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರ ಪೀಡಿತ ಎಂದು ೋಷಿಸಲಾಗಿದೆ. ನಾಡಿನ ಜನರ ಹಿತ ಕಾಯುವ ಪರಿಷತ್ತು ಬರಗಾಲದಲ್ಲಿ ಅದ್ಧೂರಿತನದಿಂದ ಸಮ್ಮೇಳನ ನಡೆಯುವ ಅವಶ್ಯಕತೆ ಇಲ್ಲ ಎಂಬ ನಿರ್ಧಾರಕ್ಕೆ ಬಂದಿದೆ. ೆಬ್ರವರಿ ವೇಳೆಗೆ ಪರಿಸ್ಥಿತಿ ಅವಲೋಕಿಸಿ ಸಮ್ಮೇಳನ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬರ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಸರ್ಕಾರ ಮುಂದಿನ ವರ್ಷ ನಡೆಸಲು ತೀರ್ಮಾನ ಮಾಡಿರುವುದನ್ನು ಸ್ವಾಗತಿಸಿರುವ ಅವರು, ರಾಜ್ಯದಲ್ಲಿ ಬರಗಾಲ ತಲೆದೂರಿರುವುದರಿಂದ ಈ ಬಾರಿ ಮೈಸೂರು ದಸರಾ ಸೇರಿ ಎಲ್ಲ ಉತ್ಸವಗಳನ್ನು ಸಾಂಕೇತಿಕವಾಗಿ ಸರಳವಾಗಿ ಆಚರಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 15 =
Remember me
