ಹಾವೇರಿ:ಮೈಸೂರು ದಸರಾಗಿಂತ ಅದ್ದೂರಿಯಾಗಿ ಮತ್ತು ಅಚ್ಚುಕಟ್ಟಾಗಿ ಹಾವೇರಿ ಸಾಹಿತ್ಯ ಸಮ್ಮೇಳನ ನಡೆಯಬೇಕು ಎಂದು ಅಧಿಕಾರಿಗಳಿಗೆ ಸಚಿವ ಸುನಿಲ್​ ಕುಮಾರ್​ ಸೂಚಿಸಿದರು.
2022ರ ಜ.6ರಿಂದ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇಲ್ಲಿನ ಜಿಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಥಮ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕರೊನಾ ಹಿನ್ನೆಲೆಯಲ್ಲಿ ಎರಡು ವರ್ಷ ಸಮ್ಮೇಳನ ನಡೆದಿರಲಿಲ್ಲ. ಹಾಗಾಗಿ, ಸಹಜವಾಗಿಯೇ ಸಮ್ಮೇಳನ ಯಶಸ್ವಿಯಾಗಬೇಕು. ಅದಕ್ಕಾಗಿ ಎಲ್ಲ 18 ಉಪ ಸಮಿತಿಗಳು ಅಚ್ಚುಕಟ್ಟಾಗಿ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​ ಹೆಬ್ಬಾರ ಮಾತನಾಡಿ, ಸಮ್ಮೇಳನ ಯಶಸ್ವಿಯಾಗಬೇಕಾದರೆ ಊಟ, ವಸತಿ ಮತ್ತು ಸಾರಿಗೆ ಸಮರ್ಪಕವಾಗಿ ಮಾಡಬೇಕು. ಹಾವೇರಿಯಲ್ಲಿ ಹೆಚ್ಚು ಹೋಟೆಲ್​ಗಳು ಇಲ್ಲ. ಹಾಗಾಗಿ ಹುಬ್ಬಳ್ಳಿ- ಧಾರವಾಡ, ದಾವಣಗೆರೆ ಹಾಗೂ ಗದಗ ಜಿಲ್ಲೆಗಳಲ್ಲಿ ವಸತಿ ವ್ಯವಸ್ಥೆ ಮಾಡಬೇಕು. ಇದಕ್ಕೆ ಅಕ್ಕಪಕ್ಕದ ಜಿಲ್ಲೆಗಳ ಅಧಿಕಾರಿಗಳು, ಸಾರ್ವಜನಿಕರ ಸಹಕಾರ ಪಡೆದು ಸಮ್ಮೇಳನ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್​ ಜೋಶಿ, ಹೆಸ್ಕಾಂ ಎಂಡಿ ಭಾರತಿ, ಜಿಲ್ಲಾಧಿಕಾರಿ ರಘುನಂದನ್​ ಮೂರ್ತಿ, ಜಿಪಂ ಸಿಇಒ ಮಹ್ಮದ್​ ರೋಷನ್, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ್​ ಪೂಜಾರ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಸಂಜೀವ್​ಕುಮಾರ್​ ನೀರಲಗಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇನ್ನೇನು ತಾಳಿಕಟ್ಟಬೇಕು, ನಾಳೆಯೇ ಹನಿಮೂನ್​… ಅಷ್ಟರಲ್ಲಿ ಪೊಲೀಸರ ಅತಿಥಿಯಾದ ವರ! ನಿಟ್ಟುಸಿರು ಬಿಟ್ಟ ವಧುವಿನ ಕುಟುಂಬಸ್ಥರು

ಸರ್ಕಾರಿ ಮಹಿಳಾ ನಿಲಯದ ಹುಡುಗಿಯ ಕೈಹಿಡಿದ ದಾವಣಗೆರೆ ಯುವಕ! ಶಾಸ್ತ್ರೋಕ್ತವಾಗಿ ಮದ್ವೆ ನಡೆಸಿಕೊಟ್ಟ ಅಧಿಕಾರಿಗಳು- ಶಾಸಕರು

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ: ವಿಜೇತರಿಗೆ ನಗದು ಬಹುಮಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 6 =
Remember me
